ಮನರಂಜನೆ

ನಾಯಕನಾದ ‘ಕೌರವ ವೆಂಕಟೇಶ್‍; ‘ಒಂದು ಸುಂದರ ದೆವ್ವದ ಕಥೆ’ ಪ್ರಾರಂಭ

ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್‍, ಕೆಲವು ದಿನಗಳ ಹಿಂದೆ ಪ್ರಥಮ್‍ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು, ಸದ್ದಿಲ್ಲದೆ ‘ಒಂದು ಸುಂದರ ದೆವ್ವದ ಕಥೆ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ.

ಆರ್ಯ ಫಿಲಂಸ್ ಲಾಂಛನದಲ್ಲಿ ಆರ್. ಲಕ್ಷ್ಮಿ ನಾರಾಯಣ ಗೌಡ ನಿರ್ಮಿಸುತ್ತಿರುವ ನೃತ್ಯ ನಿರ್ದೇಶಕ ಎಂ.ಆರ್. ಕಪಿಲ್ ನಿರ್ದೇಶಿಸುತ್ತಿರುವ ‘ಒಂದು ಸುಂದರ ದೆವ್ವದ ಕಥೆ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಲೀಲಾವತಿ ಸ್ಮಾರಕದ ಮುಂದೆ ನೆರವೇರಿತು. ಚಿತ್ರದ ಮುಹೂರ್ತ ದೃಶ್ಯಕ್ಕೆ ನಟ ವಿನೋದ್ ರಾಜ್ ಅವರು ಕ್ಲಾಪ್ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಭಾ.ಮ. ಹರೀಶ್, ಪ್ರಥಮ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಮುಹೂರ್ತದ ನಂತರ ಮಾತನಾಡಿದ ನಿರ್ದೇಶಕ‌ ಕಪಿಲ್, ‘35 ವರ್ಷಗಳ ಹಿಂದೆ ನಾನು ‘ಕೌರವ ವೆಂಕಟೇಶ್ ಅವರ ವಿದ್ಯಾರ್ಥಿ ಆಗಿದ್ದೆ. ಈಗ ಅವರ ಸಿನಿಮಾ ನಿರ್ದೇಶಿಸುವ ಅವಕಾಶ ದೊರೆತಿದೆ. ಇದೊಂದು ವಿಭಿನ್ನ ಶೀರ್ಷಿಕೆ. ಸಿನಿಮಾದಲ್ಲೂ ವಿಭಿನ್ನತೆಯಿದೆ. ಶಿಕ್ಷಣದ ಬಗ್ಗೆ ಒಂದು ಗಟ್ಟಿಯಾದ ಕಥೆಯಿದೆ. ವಿದ್ಯಾರ್ಥಿಗಳಿಗೆ ಓದು ಮುಖ್ಯನಾ? ಲಂಚ ಮುಖ್ಯನಾ? ಎಂಬ ಬಗ್ಗೆ ಒಂದು ಸಂದೇಶ ಹೇಳಿದ್ದೇವೆ. ಚಿತ್ರದಲ್ಲಿ ಅನೇಕ ಊಹಿಸಲಾಗದ ದೃಶ್ಯಗಳಿವೆ’ ಎಂದರು.

‘ಕೌರವ ವೆಂಕಟೇಶ್ ಮಾತನಾಡಿ, ‘ಇದುವರೆಗೆ ಸಾಕಷ್ಟು ಚಿತ್ರಗಳಿಗೆ ಸಾಹಸ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಈಗ ನಾಯಕನಾಗುತ್ತಿದ್ದೇನೆ. ಚಿತ್ರದಲ್ಲಿ ನನ್ನದು ಸೆಕ್ಯೂರಿಟಿ ಗಾರ್ಡ್ ಪಾತ್ರ. ವಂಚನೆಗೊಳಗಾದ ಹೆಣ್ಣುಮಕ್ಕಳಿಗೆ ಹೇಗೆ ನ್ಯಾಯ ಕೊಡಿಸುತ್ತೇನೆ ಎನ್ನುವುದೇ ಮುಖ್ಯಕಥೆ’ ಎಂದು ಹೇಳಿದರು. ಅವರಿಗೆ ನಾಯಕಿಯಾಗಿ ಧರಣಿ ನಟಿಸುತ್ತಿದ್ದಾರೆ.

‘ಒಂದು ಸುಂದರ ದೆವ್ವದ ಕಥೆ’ ಚಿತ್ರಕ್ಕೆ ಸಾಯಿಕೃಷ್ಣ ಹೆಬ್ಬಾಳ ಅವರ ಚಿತ್ರಕಥೆ ಮತ್ತು ಸಂಭಾಷಣೆ, ಹರ್ಷ ಕೊಗೋಡ್ ಸಂಗೀತ, ಶಂಕರ್ ಆರಾಧ್ಯ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

8 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

8 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

8 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

8 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

8 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

8 hours ago