ಮನರಂಜನೆ

ದುಬೈನಲ್ಲಿ ಕೆಸಿಎಲ್‍; ಲಲಿತ್‍ ಮಹಲ್‍ ಅರಮನೆಯಲ್ಲಿ ಆಟಗಾರರ ಹರಾಜು

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಕ್ರಿಕೆಟ್‍ ಟೂರ್ನಿಗಳು ನಡೆಯುತ್ತಿವೆ. ಈ ಸಾಲಿಗೆ ಈಗ ಕೆಸಿಎಲ್‍ ಸಹ ಒಂದು. ಅಂದರೆ ಕರ್ನಾಟಕ ಕ್ರಿಕೆಟ್‍ ಲೀಗ್‍. ಈ ಕ್ರಿಕೆಟ್‍ ಟೂರ್ನಿಯನ್ನು ದುಬೈನಲ್ಲಿರುವ ಅನಿವಾಸಿ ಕನ್ನಡಿಗರಿಗೆಂದೇ ವಿಶೇಷವಾಗಿ ಆಯೋಜಿಸಲಾಗಿದೆ.

ದುಬೈನಲ್ಲಿರುವ ಅನಿವಾಸಿ‌ ಕನ್ನಡಿಗರು ಚಂದನವನದ ಕಲಾವಿದರು ಹಾಗೂ ತಂತ್ರಜ್ಞರನ್ನು ಒಂದೇ ವೇದಿಕೆಯಲ್ಲಿ ಕಂಡು ಸಂಭ್ರಮಿಸುವಂತೆ ಮಾಡುವ ಸಲುವಾಗಿ ಕರ್ನಾಟಕ ಸೆಲೆಬ್ರಿಟಿ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು, ಇತ್ತೀಚಿಗೆ ಮೈಸೂರಿನ ಲಲಿತ್‍ ಮಹಲ್‍ ಪ್ಯಾಲೇಸ್‍ನಲ್ಲಿ ತಂಡದ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ.

ಈ ಕಾರ್ಯಕ್ರಮಕ್ಕೆ ಶಾಸಕ ಶ್ರೀವತ್ಸ ಸೇರಿದಂತೆ ಹಲವು ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನಟರಾದ ‘ಡಾರ್ಲಿಂಗ್’ ಕೃಷ್ಣ, ರವಿ ಚೇತನ್, ನಿರ್ದೇಶಕ ತರುಣ್ ಸುಧೀರ್, ಪವನ್ ಒಡೆಯರ್ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನಂತರ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅನಿವಾಸಿ ಕನ್ನಡಿಗ ಮಯೂರ್ ಮಾಸ್ಟರ್, ‘ದುಬೈನಲ್ಲಿರುವ ಅನಿವಾಸಿ ಕನ್ನಡಿಗರು ಒಂದುಗೂಡಿ ಕರ್ನಾಟಕ ಸೆಲೆಬ್ರಿಟಿ ಲೀಗ್ (KCL) ಸೀಸನ್ ೧ ಆಯೋಜಿಸುತ್ತಿದ್ದಾರೆ‌. ಏಪ್ರಿಲ್ 28 ರಿಂದ ಮೇ 3 ರವರೆಗೂ ದುಬೈನ‌ಲ್ಲಿ ಪಂದ್ಯಗಳು ನಡೆಯಲಿದೆ. ಕನ್ನಡ ಚಿತ್ರರಂಗದ ಕಲಾವಿದರು ಹಾಗೂ ತಂತ್ರಜ್ಞರು ಮಾತ್ರ ಭಾಗವಹಿಸಲಿದ್ದಾರೆ. ಅವರಿಗಾಗಿಯೇ ಈ ಟೂರ್ನಿ ಆಯೋಜಿಸಲಾಗಿದೆ. ದುಬೈನಲ್ಲಿರುವ ಸುಮಾರು 10 ಸಾವಿರ ಕನ್ನಡಿಗರನ್ನು ಒಂದುಗೂಡಿಸುವುದೇ ಈ ಕೆಸಿಎಲ್‍ನ ಉದ್ದೇಶ’ ಎಂದರು.

ಅನಿವಾಸಿ ಕನ್ನಡಿಗ ಸಿರಾಜ್ ಮಾತನಾಡಿ, ‘ಕೋವಿಡ್‍ಗೂ ಮೊದಲೇ ದುಬೈನಲ್ಲಿ ಅನಿವಾಸಿ ಕನ್ನಡಿಗರ ಸಂಘ ಹುಟ್ಟಿಕೊಂಡಿತ್ತು.‌ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಕನ್ನಡಿಗರನ್ನು ಒಂದೆಡೆ ಸೇರಿಸುವ ಉದ್ದೇಶ ನಮ್ಮದಾಗಿತ್ತು. ಕೋವಿಡ್ ಸಮಯದಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದಾಗ ಅವರಿಗೆ ವಿಮಾನ ಸೇವೆ ಸೇರಿದಂತೆ ಬೇರೆಬೇರೆ ರೀತಿಯಲ್ಲಿ ನಮ್ಮ ಸಂಘ ನೆರವಾಗಿ ನಿಂತಿದೆ. ಜೊತೆಗೆ ಕೆಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಆದರೆ ಒಂದು ದೊಡ್ಡ ಕಾರ್ಯಕ್ರಮ ಮಾಡಿ ಎಲ್ಲರನ್ನೂ ಒಂದೆಡೆ ಸೇರಿಸಲು ಸಾಧ್ಯವಾಗಿರಲಿಲ್ಲ. ಕ್ರಿಕೆಟ್ ಹೆಚ್ಚು ಜನಪ್ರಿಯವಾಗಿರುವುದರಿಂದ ಕನ್ನಡದ ಸೆಲೆಬ್ರಿಟಿಗಳನ್ನು ದುಬೈಗೆ ಕರೆಸಲು ಈ ಟೂರ್ನಿ ಮಾಡುತ್ತಿದ್ದೇವೆ. ಇದರಿಂದ ಎಲ್ಲಾ‌ ಕಲಾವಿದರನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶ ದುಬೈನಲ್ಲಿನ ಕನ್ನಡಿಗರಿಗೆ ಸಿಗಲಿದೆ’ ಎಂದರು.

ಈ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದೆ. 12 ಓವರ್‍ಗಳ ಪಂದ್ಯ ಇದ್ದಾಗಿದ್ದು, ಎರಡು ಗುಂಪಿನಲ್ಲಿ ತಲಾ ಐದು ತಂಡಗಳಿವೆ. ಪ್ರತಿ ತಂಡ ನಾಲ್ಕು ಪಂದ್ಯಗಳನ್ನಾಡಲಿದೆ. ಪ್ರತಿ ಗುಂಪಿನ ಟಾಪ್ ಎರಡು ತಂಡಗಳು ನಾಕೌಟ್ ಪಂದ್ಯ ಆಡಲಿದೆ. ಪಂದ್ಯದ ನೇರಪ್ರಸಾರವೂ ಇರಲಿದೆ. ‘ಲೂಸ್ ಮಾದ’ ಯೋಗಿ, ಕೃಷ್ಣ, ತರುಣ್ ಸುಧೀರ್ ಸೇರಿದಂತೆ ಹಲವರು ತಂಡದ ನಾಯಕರಾಗಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

19 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

25 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

28 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago