ಮನರಂಜನೆ

ದೀಪಾವಳಿಗೂ ಬರದ ‘ಕೆಡಿ – ದಿ ಡೆವಿಲ್‍’; ಶಿವರಾತ್ರಿಗೆ ಬರ್ತಾನಾ?

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಹೌದು, ಮೂಲಗಳ ಪ್ರಕಾರ, ಮುಂದಿನ ವರ್ಷ ಫೆಬ್ರವರಿ 13ರಂದು ಶಿವರಾತ್ರಿ ಪ್ರಯುಕ್ತ ‘ಕೆಡಿ – ದಿ ಡೆವಿಲ್‍’ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತು ಕನ್ನಡ ಚಿತ್ರರಂಗದ ವಲಯದಲ್ಲಿ ಇದೆ. ಆದರೆ, ಪ್ರೇಮ್‍ ಇದುವರೆಗೂ ಈ ಕುರಿತಾಗಿ ಯಾವುದೇ ಅಧಿಕೃತ ಪ್ರಕಟಣೆಯ್ನೂ ಹೊರಡಿಸಿಲ್ಲ. ಇತ್ತೀಚೆಗೆ ಒಂದು ಸಮಾರಂಭದಲ್ಲಿ ಸುದೀಪ್‍ ಸಹ ಚಿತ್ರ ವಿಳಂಬವಾಗುತ್ತಿರುವ ವಿಷಯವಾಗಿ ಪ್ರೇಮ್‍ ಕಾಲೆಳೆದಿದ್ದರು. ‘ಪ್ರೇಮ್‍ಗೆ ಬಿಟ್ಟರೆ, ಅವರು ಮುಂದಿನ ವರ್ಷದ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡಿದರೂ ಆಶ್ಚರ್ಯವಿಲ್ಲ. ಆದರೆ, ಈಗಾಗಲೇ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆಯಂತೆ. ಕಾರ್ಯಕಾರಿ ನಿರ್ಮಾಪಕ ಸುಪ್ರೀತ್‍ ಒಂದು ಡೇಟ್‍ ಹೇಳಿದ್ದಾರೆ. ಆ ದಿನವಾದರೂ ಚಿತ್ರ ಬಿಡುಗಡೆಯಾಗುತ್ತದಾ ಎಂದು ಕಾದು ನೋಡಬೇಕು’ ಎಂದು ಕಿಚಾಯಿಸಿದ್ದರು.

ಇನ್ನು, ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಸುದೀಪ್‍, ಇತ್ತೀಚೆಗೆ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ನಿಜಕ್ಕೂ ನಟಿಸಿದ್ದು, ಹೈದರಾಬಾದ್‍ನಲ್ಲಿ ನಡೆದ ಚಿತ್ರೀಕರಣದಲ್ಲಿ ಅವರು ಭಾಗವಹಿಸಿದ್ದಾರೆ. ಸುದೀಪ್‍ ನಟಿಸುತ್ತಿರುವ ವಿಷಯವನ್ನು ಚಿತ್ರತಂಡದವರೇ ಸ್ಪಷ್ಟಪಡಿಸಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಕ್ತಾಯದ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

‘ಕೆಡಿ – ದಿ ಡೆವಿಲ್‍’ ಚಿತ್ರಕ್ಕೆ ಪ್ರೇಮ್‍ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕೆ.ವಿ.ಎನ್‍ ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರವಿಚಂದ್ರನ್‍, ರಮೇಶ್‍ ಅರವಿಂದ್‍, ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅರ್ಜುನ್‍ ಜನ್ಯ ಸಂಗೀತ ಮತ್ತು ವಿಲಿಯಂ ಡೇವಿಡ್‍ ಛಾಯಾಗ್ರಹಣ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

5 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

7 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

7 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

7 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

7 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

8 hours ago