ಮನರಂಜನೆ

ದೀಪಾವಳಿಗೂ ಬರದ ‘ಕೆಡಿ – ದಿ ಡೆವಿಲ್‍’; ಶಿವರಾತ್ರಿಗೆ ಬರ್ತಾನಾ?

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಹೌದು, ಮೂಲಗಳ ಪ್ರಕಾರ, ಮುಂದಿನ ವರ್ಷ ಫೆಬ್ರವರಿ 13ರಂದು ಶಿವರಾತ್ರಿ ಪ್ರಯುಕ್ತ ‘ಕೆಡಿ – ದಿ ಡೆವಿಲ್‍’ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತು ಕನ್ನಡ ಚಿತ್ರರಂಗದ ವಲಯದಲ್ಲಿ ಇದೆ. ಆದರೆ, ಪ್ರೇಮ್‍ ಇದುವರೆಗೂ ಈ ಕುರಿತಾಗಿ ಯಾವುದೇ ಅಧಿಕೃತ ಪ್ರಕಟಣೆಯ್ನೂ ಹೊರಡಿಸಿಲ್ಲ. ಇತ್ತೀಚೆಗೆ ಒಂದು ಸಮಾರಂಭದಲ್ಲಿ ಸುದೀಪ್‍ ಸಹ ಚಿತ್ರ ವಿಳಂಬವಾಗುತ್ತಿರುವ ವಿಷಯವಾಗಿ ಪ್ರೇಮ್‍ ಕಾಲೆಳೆದಿದ್ದರು. ‘ಪ್ರೇಮ್‍ಗೆ ಬಿಟ್ಟರೆ, ಅವರು ಮುಂದಿನ ವರ್ಷದ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡಿದರೂ ಆಶ್ಚರ್ಯವಿಲ್ಲ. ಆದರೆ, ಈಗಾಗಲೇ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆಯಂತೆ. ಕಾರ್ಯಕಾರಿ ನಿರ್ಮಾಪಕ ಸುಪ್ರೀತ್‍ ಒಂದು ಡೇಟ್‍ ಹೇಳಿದ್ದಾರೆ. ಆ ದಿನವಾದರೂ ಚಿತ್ರ ಬಿಡುಗಡೆಯಾಗುತ್ತದಾ ಎಂದು ಕಾದು ನೋಡಬೇಕು’ ಎಂದು ಕಿಚಾಯಿಸಿದ್ದರು.

ಇನ್ನು, ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಸುದೀಪ್‍, ಇತ್ತೀಚೆಗೆ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ನಿಜಕ್ಕೂ ನಟಿಸಿದ್ದು, ಹೈದರಾಬಾದ್‍ನಲ್ಲಿ ನಡೆದ ಚಿತ್ರೀಕರಣದಲ್ಲಿ ಅವರು ಭಾಗವಹಿಸಿದ್ದಾರೆ. ಸುದೀಪ್‍ ನಟಿಸುತ್ತಿರುವ ವಿಷಯವನ್ನು ಚಿತ್ರತಂಡದವರೇ ಸ್ಪಷ್ಟಪಡಿಸಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಕ್ತಾಯದ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

‘ಕೆಡಿ – ದಿ ಡೆವಿಲ್‍’ ಚಿತ್ರಕ್ಕೆ ಪ್ರೇಮ್‍ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕೆ.ವಿ.ಎನ್‍ ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರವಿಚಂದ್ರನ್‍, ರಮೇಶ್‍ ಅರವಿಂದ್‍, ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅರ್ಜುನ್‍ ಜನ್ಯ ಸಂಗೀತ ಮತ್ತು ವಿಲಿಯಂ ಡೇವಿಡ್‍ ಛಾಯಾಗ್ರಹಣ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

6 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

7 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

8 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago