ಮನರಂಜನೆ

ದೀಪಾವಳಿಗೂ ಬರದ ‘ಕೆಡಿ – ದಿ ಡೆವಿಲ್‍’; ಶಿವರಾತ್ರಿಗೆ ಬರ್ತಾನಾ?

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಹೌದು, ಮೂಲಗಳ ಪ್ರಕಾರ, ಮುಂದಿನ ವರ್ಷ ಫೆಬ್ರವರಿ 13ರಂದು ಶಿವರಾತ್ರಿ ಪ್ರಯುಕ್ತ ‘ಕೆಡಿ – ದಿ ಡೆವಿಲ್‍’ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತು ಕನ್ನಡ ಚಿತ್ರರಂಗದ ವಲಯದಲ್ಲಿ ಇದೆ. ಆದರೆ, ಪ್ರೇಮ್‍ ಇದುವರೆಗೂ ಈ ಕುರಿತಾಗಿ ಯಾವುದೇ ಅಧಿಕೃತ ಪ್ರಕಟಣೆಯ್ನೂ ಹೊರಡಿಸಿಲ್ಲ. ಇತ್ತೀಚೆಗೆ ಒಂದು ಸಮಾರಂಭದಲ್ಲಿ ಸುದೀಪ್‍ ಸಹ ಚಿತ್ರ ವಿಳಂಬವಾಗುತ್ತಿರುವ ವಿಷಯವಾಗಿ ಪ್ರೇಮ್‍ ಕಾಲೆಳೆದಿದ್ದರು. ‘ಪ್ರೇಮ್‍ಗೆ ಬಿಟ್ಟರೆ, ಅವರು ಮುಂದಿನ ವರ್ಷದ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡಿದರೂ ಆಶ್ಚರ್ಯವಿಲ್ಲ. ಆದರೆ, ಈಗಾಗಲೇ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆಯಂತೆ. ಕಾರ್ಯಕಾರಿ ನಿರ್ಮಾಪಕ ಸುಪ್ರೀತ್‍ ಒಂದು ಡೇಟ್‍ ಹೇಳಿದ್ದಾರೆ. ಆ ದಿನವಾದರೂ ಚಿತ್ರ ಬಿಡುಗಡೆಯಾಗುತ್ತದಾ ಎಂದು ಕಾದು ನೋಡಬೇಕು’ ಎಂದು ಕಿಚಾಯಿಸಿದ್ದರು.

ಇನ್ನು, ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಸುದೀಪ್‍, ಇತ್ತೀಚೆಗೆ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ನಿಜಕ್ಕೂ ನಟಿಸಿದ್ದು, ಹೈದರಾಬಾದ್‍ನಲ್ಲಿ ನಡೆದ ಚಿತ್ರೀಕರಣದಲ್ಲಿ ಅವರು ಭಾಗವಹಿಸಿದ್ದಾರೆ. ಸುದೀಪ್‍ ನಟಿಸುತ್ತಿರುವ ವಿಷಯವನ್ನು ಚಿತ್ರತಂಡದವರೇ ಸ್ಪಷ್ಟಪಡಿಸಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಕ್ತಾಯದ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

‘ಕೆಡಿ – ದಿ ಡೆವಿಲ್‍’ ಚಿತ್ರಕ್ಕೆ ಪ್ರೇಮ್‍ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕೆ.ವಿ.ಎನ್‍ ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರವಿಚಂದ್ರನ್‍, ರಮೇಶ್‍ ಅರವಿಂದ್‍, ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅರ್ಜುನ್‍ ಜನ್ಯ ಸಂಗೀತ ಮತ್ತು ವಿಲಿಯಂ ಡೇವಿಡ್‍ ಛಾಯಾಗ್ರಹಣ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

3 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

3 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

14 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

14 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

14 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

14 hours ago