ಮನರಂಜನೆ

ದೀಪಾವಳಿಗೂ ಬರದ ‘ಕೆಡಿ – ದಿ ಡೆವಿಲ್‍’; ಶಿವರಾತ್ರಿಗೆ ಬರ್ತಾನಾ?

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ.

ಹೌದು, ಮೂಲಗಳ ಪ್ರಕಾರ, ಮುಂದಿನ ವರ್ಷ ಫೆಬ್ರವರಿ 13ರಂದು ಶಿವರಾತ್ರಿ ಪ್ರಯುಕ್ತ ‘ಕೆಡಿ – ದಿ ಡೆವಿಲ್‍’ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾತು ಕನ್ನಡ ಚಿತ್ರರಂಗದ ವಲಯದಲ್ಲಿ ಇದೆ. ಆದರೆ, ಪ್ರೇಮ್‍ ಇದುವರೆಗೂ ಈ ಕುರಿತಾಗಿ ಯಾವುದೇ ಅಧಿಕೃತ ಪ್ರಕಟಣೆಯ್ನೂ ಹೊರಡಿಸಿಲ್ಲ. ಇತ್ತೀಚೆಗೆ ಒಂದು ಸಮಾರಂಭದಲ್ಲಿ ಸುದೀಪ್‍ ಸಹ ಚಿತ್ರ ವಿಳಂಬವಾಗುತ್ತಿರುವ ವಿಷಯವಾಗಿ ಪ್ರೇಮ್‍ ಕಾಲೆಳೆದಿದ್ದರು. ‘ಪ್ರೇಮ್‍ಗೆ ಬಿಟ್ಟರೆ, ಅವರು ಮುಂದಿನ ವರ್ಷದ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡಿದರೂ ಆಶ್ಚರ್ಯವಿಲ್ಲ. ಆದರೆ, ಈಗಾಗಲೇ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆಯಂತೆ. ಕಾರ್ಯಕಾರಿ ನಿರ್ಮಾಪಕ ಸುಪ್ರೀತ್‍ ಒಂದು ಡೇಟ್‍ ಹೇಳಿದ್ದಾರೆ. ಆ ದಿನವಾದರೂ ಚಿತ್ರ ಬಿಡುಗಡೆಯಾಗುತ್ತದಾ ಎಂದು ಕಾದು ನೋಡಬೇಕು’ ಎಂದು ಕಿಚಾಯಿಸಿದ್ದರು.

ಇನ್ನು, ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಸುದೀಪ್‍, ಇತ್ತೀಚೆಗೆ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ನಿಜಕ್ಕೂ ನಟಿಸಿದ್ದು, ಹೈದರಾಬಾದ್‍ನಲ್ಲಿ ನಡೆದ ಚಿತ್ರೀಕರಣದಲ್ಲಿ ಅವರು ಭಾಗವಹಿಸಿದ್ದಾರೆ. ಸುದೀಪ್‍ ನಟಿಸುತ್ತಿರುವ ವಿಷಯವನ್ನು ಚಿತ್ರತಂಡದವರೇ ಸ್ಪಷ್ಟಪಡಿಸಿದ್ದಾರೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಕ್ತಾಯದ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

‘ಕೆಡಿ – ದಿ ಡೆವಿಲ್‍’ ಚಿತ್ರಕ್ಕೆ ಪ್ರೇಮ್‍ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಕೆ.ವಿ.ಎನ್‍ ಪ್ರೊಡಕ್ಷನ್ಸ್ ಬ್ಯಾನರ್‍ನಡಿ ಈ ಚಿತ್ರವನ್ನು ನಿರ್ಮಿಸಲಾಗಿದೆ. ಚಿತ್ರದಲ್ಲಿ ಧ್ರುವ ಸರ್ಜಾ, ರೀಷ್ಮಾ ನಾಣಯ್ಯ, ರವಿಚಂದ್ರನ್‍, ರಮೇಶ್‍ ಅರವಿಂದ್‍, ಸಂಜಯ್‍ ದತ್‍, ಶಿಲ್ಪಾ ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಅರ್ಜುನ್‍ ಜನ್ಯ ಸಂಗೀತ ಮತ್ತು ವಿಲಿಯಂ ಡೇವಿಡ್‍ ಛಾಯಾಗ್ರಹಣ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

2 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

3 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

14 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

15 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

16 hours ago