ಮನರಂಜನೆ

ಸಂಗೀತಾ ಭಟ್‍ ಎಂಬ ‘ಪುಣ್ಯಾತ್ಗಿತ್ತಿ…’: ‘ಖೇಲಾ’ ಚಿತ್ರದ ಹಾಡು ಬಿಡುಗಡೆ

ಹಲವು ವರ್ಷಗಳ ಹಿಂದೆ ‘ಡಾ.ಬಿ.ಆರ್.ಅಂಬೇಡ್ಕರ್’ ಚಿತ್ರ ನಿರ್ಮಿಸುವುದರ ಜೊತೆಗೆ ಅಂಬೇಡ್ಕರ್ ಅವರ ಪಾತ್ರ ನಿರ್ವಹಿಸಿದ್ದ ವಿಷ್ಣುಕಾಂತ್‍ ಅವರ ಮಗ ಭರತ್, ಇದೀಗ ಸದ್ದಿಲ್ಲದೆ ಒಂದು ಚಿತ್ರವನ್ನು ಬಹುತೇಕ ನಿರ್ಮಿಸಿ-ನಿರ್ದೇಶಿಸಿದ್ದಾರೆ. ಹೆಸರು ‘ಖೇಲಾ’. ಕೆಲವು ದಿನಗಳ ಹಿಂದೆ ಈ ಚಿತ್ರದ ತಾಯಿ ಸೆಂಟಿಮೆಂಟ್‍ ಹಾಡು ಬಿಡುಗಡೆಯಾಗಿತ್ತು. ಈಗ ಚಿತ್ರದ ‘ಪುಣ್ಯಾತ್ಗಿತ್ತಿ…’ ಎಂಬ ಹಾಡು ಬಿಡುಗಡೆ ಆಗಿದೆ.

‘ಪುಣ್ಯಾತ್ಗಿತ್ತಿ …’ ಹಾಡನ್ನು ಪ್ರಮೋದ್‍ ಜೋಯಿಸ್‍ ಬರೆದಿದ್ದು, ವೇಲ್‍ ಮುರುಗನ್‍ ಹಾಡಿದ್ದಾರೆ. ಎಂ.ಎಸ್.ತ್ಯಾಗರಾಜ್ ಸಂಗೀತ ಸಂಯೋಜಿಸಿದ್ದಾರೆ. ‘ಶ್ರಾವಣಿ ಸುಬ್ರಹ್ಮಣ್ಯ’ ಹಾಗೂ ‘ಮೈನಾ’ ಧಾರಾವಾಹಿಗಳ ವಿಹಾನ್ ಪ್ರಭಂಜನ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಅವರ ಜೊತೆಗೆ ಸಂಗೀತ ಭಟ್‍ ಸಹ ಈ ಹಾಡಿನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಭರತ್‍, ‘ಅಪ್ಪನ ಮಾರ್ಗದರ್ಶನದಲ್ಲಿ ಈ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ‘ಖೇಲಾ’ ಎಂಬುದು ಹಿಂದಿ ಪದ ಅಲ್ಲ, ಇದು ಸಂಸ್ಕೃತದ ಪದ. ಹಾಗೆಂದರೆ ಆಟಗಾರ ಎಂದರ್ಥ. ಇಲ್ಲಿ ಆಟಗಾರ ಯಾರು? ಯಾವ ತರಹ ಆಡುತ್ತಾನೆ? ಎಂಬುದು ಚಿತ್ರದ ಕಥೆ. ಇದರಲ್ಲಿ ಪ್ರೇಮಕಥೆ, ತಾಯಿ – ಮಗನ ಬಾಂಧವ್ಯ, ಸ್ನೇಹ ಎಲ್ಲವೂ ಇದೆ. ಈ ಹಾಡನ್ನು ಕೇವಲ ಅರ್ಧ ಗಂಟೆಯಲ್ಲಿ ಬರೆದು ಮುಗಿಸಲಾಯಿತು. ಸಂಗೀತಾ ಭಟ್‍ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಮುಂದಿನ ತಿಂಗಳು ಅವರ ಪಾತ್ರದ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ. ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಒಂದು ಹಾಡು ಹಾಗು ಒಂದು ಫೈಟ್ ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರೀಕರಣ ಮುಗಿದಿದೆ. ಆಗಸ್ಟ್ ಅಥವಾ ಸೆಪ್ಟೆಂಬರ್ ವೇಳೆಗೆ ಚಿತ್ರ ಬಿಡುಗಡೆ ಆಗಲಿದೆ’ ಎಂದರು.

ನಾಯಕ ವಿಹಾನ್‍ ಪ್ರಭಂಜನ್‍ ಮಾತನಾಡಿ, ‘ತಾಯಂದಿರ ದಿನದಂದು ಬಿಡುಗಡೆಯಾದ ತಾಯಿ – ಮಗನ ಬಾಂಧವ್ಯದ ಹಾಡು ಈಗಾಗಲೇ ಜನಪ್ರಿಯವಾಗಿದೆ. ಇಂದು ಬಿಡುಗಡೆಯಾಗಿರುವ ‘ಪುಣ್ಯಾತ್ಗಿತ್ತಿ …’ ಹಾಡು ಕೂಡ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.‌ ಈ ‌ಚಿತ್ರದಲ್ಲಿ ಕಾಲೇಜು ಹುಡುಗನಾಗಿ ಕಾಣಿಸಿಕೊಂಡಿದ್ದೇನೆ’ ಎಂದರು.

‘ಖೇಲಾ’ ಚಿತ್ರದಲ್ಲಿ ಪ್ರಭಂಜನ್‍ಗೆ ನಾಯಕಿಯಾಗಿ ಆಶಿಕಾ ರಾವ್‍ ನಟಿಸಿದ್ದು, ಮಿಕ್ಕಂತೆ ಯುವರಾಜ್ ಗೌಡ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ತ್ಯಾಗರಾಜ್‍ ಸಂಗೀತ ಮತ್ತು ಸ್ವಾಮಿ ಮೈಸೂರು ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago