ಬೆಂಗಳೂರು : ಸ್ಯಾಂಡಲ್ವುಡ್ನ ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೂ ಅನಂತ್ ಅಂಬಾನಿ ವಿವಾಹಕ್ಕೆ ಆಮಂತ್ರಣ ಬಂದಿದ್ದು, ಮದುವೆಗೆ ಹೋಗದಿರಲು ಸ್ವತಃ ಸುದೀಪ್ ಕಾರಣ ತಿಳಿಸಿದ್ದಾರೆ.
ಏಶಿಯಾದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮುಖೇಶ್ ಅಂಬಾನಿಯ ಎರಡನೇ ಪುತ್ರ ಅನಂತ್ ಅಂಬಾನಿಯ ಅದ್ದೂರಿ ವಿವಾಹ ಮಹೋತ್ಸವದಲ್ಲಿ ದೇಶ-ವಿದೇಶಗಳಿಂದ ಚಿತ್ರನಟರು, ರಾಜಕಾರಣಿಗಳು ಹಾಗೂ ಬಿಸನೆಸ್ಮೆನ್ಗಳು ಭಾಗಿಯಾಗಿದ್ದರು.
ಕನ್ನಡ ಚಿತ್ರರಂಗದಿಂದ ನಟ ಯಶ್ ದಂಪತಿಗಳು ಭಾಗಿಯಾಗಿದ್ದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಕಿಚ್ಚ ಸುದೀಪ್, ತಮಗೂ ಅನಂತ್ ಅಂಬಾನಿ ಮದುವೆಗೆ ಆಮಂತ್ರಣ ಬಂದಿದ್ದು, ವಿವಾಹ ಮಹೋತ್ಸವದಲ್ಲಿ ಭಾಗಿಯಾಗದಿರಲು ಕಾರಣ ಬಿಚ್ಚಿಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನನಗೂ ಅನಂತ್ ಅಂಬಾನಿ ವಿವಾಹ ಮಹೋತ್ಸವದ ಆಮಂತ್ರಣ ಬಂದಿದೆ. ಆದರೆ ಆರೋಗ್ಯದ ಸಮಸ್ಯೆಯಿಂದ ಭಾಗಿಯಾಯಗಲು ಸಾಧ್ಯವಾಗಲಿಲ್ಲ. ವಿವಾಹ ನಡೆಯುತ್ತಿದ್ದ ಸ್ಥಳದಲ್ಲಿ ಕೆಲವು ಕಟ್ಟುಪಾಡು ಹಾಗೂ ನಿಯಮಗಳಿದ್ದ ಕಾರಣ ನನ್ನಿಂದ ಸಮಸ್ಯೆಯಾಗಬಾರದು ಎಂಬ ಕಾರಣದಿಂದ ವಿವಾಹಕ್ಕೆ ಭೇಟಿ ನೀಡಿರಲಿಲ್ಲ. ನನಗೂ ಜ್ವರ ಹಾಗೂ ನೆಗಡಿ ಇದ್ದ ಕಾರಣ ನನ್ನಿಂದ ತೊಂದುರೆಯಾಗಬಾರದು ಎಂದು ಸುಮ್ಮನಾದೆ ಎಂದು ಹೇಳಿದ್ದಾರೆ.
ಮುಂದುವರೆದು, ಮುಖೇಶ್ ಅಂಬಾನಿ ಅವರನ್ನು ಭೇಟಿಯಾಗುವುದು ನಮ್ಮ ಅದೃಷ್ಠ. ಮುಂದೊಂದು ದಿನ ಖಂಡಿತ ಅವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …
ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …
ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ ಪೈಪ್ಗಳನ್ನು ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಪೈಪ್ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…