ಬೆಂಗಳೂರು : ಸ್ಯಾಂಡಲ್ವುಡ್ನ ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೂ ಅನಂತ್ ಅಂಬಾನಿ ವಿವಾಹಕ್ಕೆ ಆಮಂತ್ರಣ ಬಂದಿದ್ದು, ಮದುವೆಗೆ ಹೋಗದಿರಲು ಸ್ವತಃ ಸುದೀಪ್ ಕಾರಣ ತಿಳಿಸಿದ್ದಾರೆ.
ಏಶಿಯಾದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮುಖೇಶ್ ಅಂಬಾನಿಯ ಎರಡನೇ ಪುತ್ರ ಅನಂತ್ ಅಂಬಾನಿಯ ಅದ್ದೂರಿ ವಿವಾಹ ಮಹೋತ್ಸವದಲ್ಲಿ ದೇಶ-ವಿದೇಶಗಳಿಂದ ಚಿತ್ರನಟರು, ರಾಜಕಾರಣಿಗಳು ಹಾಗೂ ಬಿಸನೆಸ್ಮೆನ್ಗಳು ಭಾಗಿಯಾಗಿದ್ದರು.
ಕನ್ನಡ ಚಿತ್ರರಂಗದಿಂದ ನಟ ಯಶ್ ದಂಪತಿಗಳು ಭಾಗಿಯಾಗಿದ್ದ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಕಿಚ್ಚ ಸುದೀಪ್, ತಮಗೂ ಅನಂತ್ ಅಂಬಾನಿ ಮದುವೆಗೆ ಆಮಂತ್ರಣ ಬಂದಿದ್ದು, ವಿವಾಹ ಮಹೋತ್ಸವದಲ್ಲಿ ಭಾಗಿಯಾಗದಿರಲು ಕಾರಣ ಬಿಚ್ಚಿಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನನಗೂ ಅನಂತ್ ಅಂಬಾನಿ ವಿವಾಹ ಮಹೋತ್ಸವದ ಆಮಂತ್ರಣ ಬಂದಿದೆ. ಆದರೆ ಆರೋಗ್ಯದ ಸಮಸ್ಯೆಯಿಂದ ಭಾಗಿಯಾಯಗಲು ಸಾಧ್ಯವಾಗಲಿಲ್ಲ. ವಿವಾಹ ನಡೆಯುತ್ತಿದ್ದ ಸ್ಥಳದಲ್ಲಿ ಕೆಲವು ಕಟ್ಟುಪಾಡು ಹಾಗೂ ನಿಯಮಗಳಿದ್ದ ಕಾರಣ ನನ್ನಿಂದ ಸಮಸ್ಯೆಯಾಗಬಾರದು ಎಂಬ ಕಾರಣದಿಂದ ವಿವಾಹಕ್ಕೆ ಭೇಟಿ ನೀಡಿರಲಿಲ್ಲ. ನನಗೂ ಜ್ವರ ಹಾಗೂ ನೆಗಡಿ ಇದ್ದ ಕಾರಣ ನನ್ನಿಂದ ತೊಂದುರೆಯಾಗಬಾರದು ಎಂದು ಸುಮ್ಮನಾದೆ ಎಂದು ಹೇಳಿದ್ದಾರೆ.
ಮುಂದುವರೆದು, ಮುಖೇಶ್ ಅಂಬಾನಿ ಅವರನ್ನು ಭೇಟಿಯಾಗುವುದು ನಮ್ಮ ಅದೃಷ್ಠ. ಮುಂದೊಂದು ದಿನ ಖಂಡಿತ ಅವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…