ಮನರಂಜನೆ

ಅನಂತ್‌ ಅಂಬಾನಿ ಮದುವೆಗೆ ಹೋಗದಿರಲು ಕಾರಣ ಬಿಚ್ಚಿಟ್ಟ ಕಿಚ್ಚ !

ಬೆಂಗಳೂರು : ಸ್ಯಾಂಡಲ್‌ವುಡ್‌ನ ಅಭಿನಯಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೂ ಅನಂತ್‌ ಅಂಬಾನಿ ವಿವಾಹಕ್ಕೆ ಆಮಂತ್ರಣ ಬಂದಿದ್ದು, ಮದುವೆಗೆ ಹೋಗದಿರಲು ಸ್ವತಃ ಸುದೀಪ್‌ ಕಾರಣ ತಿಳಿಸಿದ್ದಾರೆ.

ಏಶಿಯಾದ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತದ ಮುಖೇಶ್‌ ಅಂಬಾನಿಯ ಎರಡನೇ ಪುತ್ರ ಅನಂತ್‌ ಅಂಬಾನಿಯ ಅದ್ದೂರಿ ವಿವಾಹ ಮಹೋತ್ಸವದಲ್ಲಿ ದೇಶ-ವಿದೇಶಗಳಿಂದ ಚಿತ್ರನಟರು, ರಾಜಕಾರಣಿಗಳು ಹಾಗೂ ಬಿಸನೆಸ್‌ಮೆನ್‌ಗಳು ಭಾಗಿಯಾಗಿದ್ದರು.

ಕನ್ನಡ ಚಿತ್ರರಂಗದಿಂದ ನಟ ಯಶ್‌ ದಂಪತಿಗಳು ಭಾಗಿಯಾಗಿದ್ದ ವೀಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಇದೀಗ ಕಿಚ್ಚ ಸುದೀಪ್‌, ತಮಗೂ ಅನಂತ್‌ ಅಂಬಾನಿ ಮದುವೆಗೆ ಆಮಂತ್ರಣ ಬಂದಿದ್ದು, ವಿವಾಹ ಮಹೋತ್ಸವದಲ್ಲಿ ಭಾಗಿಯಾಗದಿರಲು ಕಾರಣ ಬಿಚ್ಚಿಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ನನಗೂ ಅನಂತ್‌ ಅಂಬಾನಿ ವಿವಾಹ ಮಹೋತ್ಸವದ ಆಮಂತ್ರಣ ಬಂದಿದೆ. ಆದರೆ ಆರೋಗ್ಯದ ಸಮಸ್ಯೆಯಿಂದ ಭಾಗಿಯಾಯಗಲು ಸಾಧ್ಯವಾಗಲಿಲ್ಲ. ವಿವಾಹ ನಡೆಯುತ್ತಿದ್ದ ಸ್ಥಳದಲ್ಲಿ ಕೆಲವು ಕಟ್ಟುಪಾಡು ಹಾಗೂ ನಿಯಮಗಳಿದ್ದ ಕಾರಣ ನನ್ನಿಂದ ಸಮಸ್ಯೆಯಾಗಬಾರದು ಎಂಬ ಕಾರಣದಿಂದ ವಿವಾಹಕ್ಕೆ ಭೇಟಿ ನೀಡಿರಲಿಲ್ಲ. ನನಗೂ ಜ್ವರ ಹಾಗೂ ನೆಗಡಿ ಇದ್ದ ಕಾರಣ ನನ್ನಿಂದ ತೊಂದುರೆಯಾಗಬಾರದು ಎಂದು ಸುಮ್ಮನಾದೆ ಎಂದು ಹೇಳಿದ್ದಾರೆ.

ಮುಂದುವರೆದು, ಮುಖೇಶ್‌ ಅಂಬಾನಿ ಅವರನ್ನು ಭೇಟಿಯಾಗುವುದು ನಮ್ಮ ಅದೃಷ್ಠ. ಮುಂದೊಂದು ದಿನ ಖಂಡಿತ ಅವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

3 mins ago

ಅಪ್ಪಂದಿರ ಬದಲು ತಾವೇ ನಾಯಕತ್ವ ಹೊರಲು ಸಜ್ಜಾದ ಪುತ್ರರು

ಕೆ.ಬಿ.ರಮೇಶನಾಯಕ ಈಗಾಗಲೇ ಜವಾಬ್ದಾರಿ ಹೊತ್ತಿರುವ ಡಾ.ಯತೀಂದ್ರ, ಸುನಿಲ್‌ಬೋಸ್, ಜಿ.ಡಿ.ಹರೀಶ್ ಗೌಡ ತಂದೆಯಂದಿರ ನಿಧನದಿಂದ ತೆರವಾದ ಸ್ಥಾನ ತುಂಬಿದ ಅನಿಲ್ ಚಿಕ್ಕಮಾದು,…

9 mins ago

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

9 hours ago

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

10 hours ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

11 hours ago