ಮನರಂಜನೆ

Kiccha Sudeep; ಕೊನೆಗೂ ಶುರುವಾಯ್ತು ಕಿಚ್ಚ ಅಭಿನಯದ ‘ಬಿಲ್ಲ ರಂಗ ಭಾಷಾ’

ಕಿಚ್ಚ ಸುದೀಪ್‍ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರು, ಈ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಯ್ತು. ಈಗ ಚಿತ್ರ ಕೊನೆಗೂ ಪ್ರಾರಂಭವಾಗಿದೆ.

ಏಪ್ರಿಲ್‍ 16ರ ಬುಧವಾರದಂದು ಚಿತ್ರ ಪ್ರಾರಂಭವಾಗಲಿದೆ ಎಂದು ಸುದೀಪ್‍ ಸೂಚನೆ ಕೊಟ್ಟಿದ್ದರು. ಅದರಂತೆ ಚಿತ್ರದ ಮುಹೂರ್ತ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ್ದು, ಚಿತ್ರೀಕರಣ ಪ್ರಾರಂಭವಾಗಲಿದೆ.

‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದಾರೆ. ಈ ಚಿತ್ರದ ಘೋಷಣೆ ಕಳೆದ ವರ್ಷ ಸುದೀಪ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧಿಕೃತವಾಗಿ ಆಗಿತ್ತು. ಆದರೆ, ಸುದೀಪ್‍ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡ ಕಾರಣ, ಚಿತ್ರೀಕರಣ ಪ್ರಾರಂಭವಾಗುವುದು ನಿಧಾನವಾಗಿತ್ತು. ಈಗ ಕೊನೆಗೂ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.

ಚಿತ್ರದ ಮುಹೂರ್ತದ ನಂತರ ಮಾತನಾಡಿರುವ ನಿರ್ದೇಶಕ ಅನೂಪ್‌ ಭಂಡಾರಿ, `20 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ. ಚಿತ್ರದ ಪ್ರಮುಖ ಸಾಹಸಮಯ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಸೆಟ್‌ ಕೆಲಸ ನಡೆಯುತ್ತಿತ್ತು. ಅದು ಈಗ ಪೂರ್ಣಗೊಂಡಿದ್ದು ಚಿತ್ರೀಕರಣಕ್ಕೆ ಸಿದ್ಧವಾಗಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿದ ಬಳಿಕ ಸಣ್ಣ ವಿರಾಮದ ನಂತರ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತೇವೆʼ ಎಂದು ತಿಳಿಸಿದ್ದಾರೆ.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್‍ ರೆಡ್ಡಿ ಮತ್ತು ಚೈತನ್ಯ ರೆಡ್ಡಿ, ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.

ಸುದೀಪ್‍ ಅಭಿನಯದಲ್ಲಿ ಅನೂಪ್ ಭಂಡಾರಿ ಇದಕ್ಕೂ ಮೊದಲು ‘ವಿಕ್ರಾಂತ್‍ ರೋಣ’ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅದಾದ ಬಳಿಕ ಈ ಜೋಡಿ ‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಕೈ ಜೋಡಿಸಿದೆ.

ಆಂದೋಲನ ಡೆಸ್ಕ್

Recent Posts

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

32 mins ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

33 mins ago

ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿಯವರ ಕನಸು ನನಸು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…

2 hours ago

ಯುದ್ಧದ ಸಮಯದಲ್ಲಿ ಸಿದ್ದರಾಮಯ್ಯ ರಾಜಕೀಯ ಮಾಡಬಾರದು: ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್‌ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.…

2 hours ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ಸಾವು

ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…

3 hours ago

ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಬೇಕು: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…

3 hours ago