ಕಿಚ್ಚ ಸುದೀಪ್ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರು, ಈ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಯ್ತು. ಈಗ ಚಿತ್ರ ಕೊನೆಗೂ ಪ್ರಾರಂಭವಾಗಿದೆ.
ಏಪ್ರಿಲ್ 16ರ ಬುಧವಾರದಂದು ಚಿತ್ರ ಪ್ರಾರಂಭವಾಗಲಿದೆ ಎಂದು ಸುದೀಪ್ ಸೂಚನೆ ಕೊಟ್ಟಿದ್ದರು. ಅದರಂತೆ ಚಿತ್ರದ ಮುಹೂರ್ತ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ್ದು, ಚಿತ್ರೀಕರಣ ಪ್ರಾರಂಭವಾಗಲಿದೆ.
‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದಾರೆ. ಈ ಚಿತ್ರದ ಘೋಷಣೆ ಕಳೆದ ವರ್ಷ ಸುದೀಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧಿಕೃತವಾಗಿ ಆಗಿತ್ತು. ಆದರೆ, ಸುದೀಪ್ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡ ಕಾರಣ, ಚಿತ್ರೀಕರಣ ಪ್ರಾರಂಭವಾಗುವುದು ನಿಧಾನವಾಗಿತ್ತು. ಈಗ ಕೊನೆಗೂ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.
ಚಿತ್ರದ ಮುಹೂರ್ತದ ನಂತರ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, `20 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ. ಚಿತ್ರದ ಪ್ರಮುಖ ಸಾಹಸಮಯ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಸೆಟ್ ಕೆಲಸ ನಡೆಯುತ್ತಿತ್ತು. ಅದು ಈಗ ಪೂರ್ಣಗೊಂಡಿದ್ದು ಚಿತ್ರೀಕರಣಕ್ಕೆ ಸಿದ್ಧವಾಗಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿದ ಬಳಿಕ ಸಣ್ಣ ವಿರಾಮದ ನಂತರ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತೇವೆʼ ಎಂದು ತಿಳಿಸಿದ್ದಾರೆ.
ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ, ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.
ಸುದೀಪ್ ಅಭಿನಯದಲ್ಲಿ ಅನೂಪ್ ಭಂಡಾರಿ ಇದಕ್ಕೂ ಮೊದಲು ‘ವಿಕ್ರಾಂತ್ ರೋಣ’ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅದಾದ ಬಳಿಕ ಈ ಜೋಡಿ ‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಕೈ ಜೋಡಿಸಿದೆ.
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…