ಕಿಚ್ಚ ಸುದೀಪ್ (Kiccha Sudeep) ಅಭಿನಯದ ‘ಬಿಲ್ಲ ರಂಗ ಭಾಷಾ’ (Billa Ranga Basha) ಚಿತ್ರದ ಬಗ್ಗೆ ಸುದ್ದಿಗಳು ಕೆಲವು ವರ್ಷಗಳಿಂದ ಕೇಳಿ ಬರುತ್ತಲೇ ಇತ್ತು. ಎಲ್ಲಾ ಅಂದುಕೊಂಡಂತೆ ಆಗಿದ್ದರು, ಈ ಚಿತ್ರವು ‘ವಿಕ್ರಾಂತ್ ರೋಣ’ಗೂ ಮೊದಲೇ ಪ್ರಾರಂಭವಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ತಡವಾಯ್ತು. ಈಗ ಚಿತ್ರ ಕೊನೆಗೂ ಪ್ರಾರಂಭವಾಗಿದೆ.
ಏಪ್ರಿಲ್ 16ರ ಬುಧವಾರದಂದು ಚಿತ್ರ ಪ್ರಾರಂಭವಾಗಲಿದೆ ಎಂದು ಸುದೀಪ್ ಸೂಚನೆ ಕೊಟ್ಟಿದ್ದರು. ಅದರಂತೆ ಚಿತ್ರದ ಮುಹೂರ್ತ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ್ದು, ಚಿತ್ರೀಕರಣ ಪ್ರಾರಂಭವಾಗಲಿದೆ.
‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದಾರೆ. ಈ ಚಿತ್ರದ ಘೋಷಣೆ ಕಳೆದ ವರ್ಷ ಸುದೀಪ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಧಿಕೃತವಾಗಿ ಆಗಿತ್ತು. ಆದರೆ, ಸುದೀಪ್ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡ ಕಾರಣ, ಚಿತ್ರೀಕರಣ ಪ್ರಾರಂಭವಾಗುವುದು ನಿಧಾನವಾಗಿತ್ತು. ಈಗ ಕೊನೆಗೂ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.
ಚಿತ್ರದ ಮುಹೂರ್ತದ ನಂತರ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, `20 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ. ಚಿತ್ರದ ಪ್ರಮುಖ ಸಾಹಸಮಯ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಅದಕ್ಕಾಗಿ ಸೆಟ್ ಕೆಲಸ ನಡೆಯುತ್ತಿತ್ತು. ಅದು ಈಗ ಪೂರ್ಣಗೊಂಡಿದ್ದು ಚಿತ್ರೀಕರಣಕ್ಕೆ ಸಿದ್ಧವಾಗಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿದ ಬಳಿಕ ಸಣ್ಣ ವಿರಾಮದ ನಂತರ ಮುಂದಿನ ಹಂತದ ಚಿತ್ರೀಕರಣಕ್ಕೆ ಸಜ್ಜಾಗುತ್ತೇವೆʼ ಎಂದು ತಿಳಿಸಿದ್ದಾರೆ.
ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್ ರೆಡ್ಡಿ ಮತ್ತು ಚೈತನ್ಯ ರೆಡ್ಡಿ, ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.
ಸುದೀಪ್ ಅಭಿನಯದಲ್ಲಿ ಅನೂಪ್ ಭಂಡಾರಿ ಇದಕ್ಕೂ ಮೊದಲು ‘ವಿಕ್ರಾಂತ್ ರೋಣ’ ಚಿತ್ರವನ್ನು ನಿರ್ದೇಶನ ಮಾಡಿದ್ದು, ಅದಾದ ಬಳಿಕ ಈ ಜೋಡಿ ‘ಬಿಲ್ಲ ರಂಗ ಬಾಷಾ’ ಚಿತ್ರಕ್ಕೆ ಕೈ ಜೋಡಿಸಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…