ಮನರಂಜನೆ

ಏಪ್ರಿಲ್‍.16ರಿಂದ ಶುರುವಾಗಲಿದೆ ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು.

ಈಗ ಏಪ್ರಿಲ್‍.16ಕ್ಕೆ ಏನಾಗಲಿದೆ ಎಂದು ಸ್ವತಃ ಸುದೀಪ್‍ ಹೇಳಿಕೊಂಡಿದ್ದಾರೆ. ‘ಏಪ್ರಿಲ್‍.16ರಂದು ಏನಾಗಲಿದೆ ಎಂಬ ಕುತೂಹಲವಿರುವವರಿಗೆ, ಅಂದು ನಮ್ಮ ‘ಬಿಲ್ಲ ರಂಗ ಭಾಷಾ’ ಚಿತ್ರ ಪ್ರಾರಂಭವಾಗಲಿದೆ’ ಎಂದು ಸೋಷಿಯಲ್‍ ಮೀಡಿಯಾದಲ್ಲಿ ಘೋಷಿಸಿದ್ದಾರೆ. ಇದನ್ನು ಕೇಳಿ ಅಭಿಮಾನಿಗಳು ಬಹಳ ಖುಷಿಯಾಗಿದ್ದಾರೆ.

ಕಳೆದ ವರ್ಷ ಸುದೀಪ್‍ ಹುಟ್ಟುಹಬ್ಬದಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದರು ನಿರ್ದೇಶಕ ಅನೂಪ್‍ ಭಂಡಾರಿ. ಅದರಂತೆ, ಅದು ‘ಬಿಲ್ಲ ರಂಗ ಭಾಷಾ’ ಚಿತ್ರದ ಅಧಿಕೃತ ಘೋಷಣೆಯಾಗಿತ್ತು. ಆದರೆ, ಸುದೀಪ್‍ ಆ ನಂತರ ‘ಬಿಗ್‍ ಬಾಸ್‍’, ‘ಮ್ಯಾಕ್ಸ್’, ಸಿಸಿಎಲ್‍ನಲ್ಲಿ ಬ್ಯುಸಿಯಾಗಿದ್ದರಿಂದ ಚಿತ್ರವು ವಿಳಂಬವಾಯಿತು. ಈಗ ಕೊನೆಗೂ ಚಿತ್ರ ಏಪ್ರಿಲ್‍.16ಕ್ಕೆ ಪ್ರಾರಂಭವಾಗುತ್ತಿದೆ.

‘ಬಿಲ್ಲ ರಂಗ ಭಾಷಾ ತಮ್ಮ ಜೀವನದಲ್ಲೇ ದೊಡ್ಡ ಚಿತ್ರವಾಗಲಿದೆ ಎಂದು ಸುದೀಪ್ ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದರು. ’ವಿಕ್ರಾಂತ್ ರೋಣ’ ನಂತರ ಒಂದು ತಂಡವಾಯಿತು. ನಮಗೆ ನಮ್ಮ ಮೇಲೆ ನಂಬಿಕೆ ಬಂತು. ಈಗ ‘ಬಿಲ್ಲ ರಂಗ ಭಾಷಾ’ ಮಾಡುವುದಕ್ಕೆ ಕೈ ಹಾಕಿದ್ದೇವೆ. ಈ ಚಿತ್ರ ನನ್ನ ಮತ್ತು ಅನೂಪ್‍ ಚಿತ್ರಜೀವನದಲ್ಲೇ ದೊಡ್ಡ ಸಿನಿಮಾ ಆಗಲಿದೆ. ಚಿತ್ರಕ್ಕೆ ಸಾಕಷ್ಟು ರೀಸರ್ಚ್ ಕೆಲಸದ ಅವಶ್ಯಕತೆ ಇತ್ತು. ಅದಕ್ಕೆ ಸಾಕಷ್ಟು ಸಮಯವಾಯಿತು. ಇದೊಂದು ಅಪರೂಪದ ಚಿತ್ರವಾಗಲಿದೆ’ ಎಂದು ಅವರು ಹೇಳಿದ್ದರು.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ತೆಲುಗಿನಲ್ಲ ‘ಹನುಮಾನ್’ ಎಂಬ ಬ್ಲಾಕ್‌ ಬಸ್ಟರ್‌ ಚಿತ್ರವನ್ನು ನಿರ್ಮಿಸಿದ್ದ ನಿರಂಜನ್‍ ರೆಡ್ಡಿ ಮತ್ತು ಚೈತನ್ಯ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಹೆಸರುಗಳನ್ನು ಚಿತ್ರತಂಡ ಸದ್ಯದಲ್ಲೇ ಘೋಷಿಸಲಿದೆ.

ಆಂದೋಲನ ಡೆಸ್ಕ್

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

5 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

5 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

6 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

7 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

7 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

8 hours ago