ಮನರಂಜನೆ

ʼಬಿಗ್‌ ಬಾಸ್‌ ಸೀಸನ್‌ 11ʼ ಕುರಿತು ಕಿಚ್ಚ ಸುದೀಪ್‌ ಸುದ್ದಿಗೋಷ್ಠಿ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ದೊಡ್ಮನೆಯ ಪ್ರೋಮೋ ರಿಲೀಸ್‌ ಆಗಿ ಮೆಚ್ಚುಗೆ ಗಳಿಸಿದೆ. ಬಿಗ್‌ ಬಾಸ್‌ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್‌ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಹಲವಾರು ಇಂಟ್ರೆಸ್ಟಿಂಗ್‌ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಜತೆಗೆ ಈ ಬಾರಿಯ ಬಿಗ್‌ ಬಾಸ್‌ ನಲ್ಲಿ ಕಿಚ್ಚ ನಿರೂಪಣೆ ಮಾಡುತ್ತಾರಾ?ಇಲ್ವಾ? ಎನ್ನುವುದು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ಬಗ್ಗೆಯೂ ಕಿಚ್ಚ ಸುದೀಪ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಾರಿಯ ಬಿಗ್‌ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂಬ ಥೀಮ್‌ ಇರಲಿದೆ. ಇಲ್ಲಿಯವರೆಗೆ ಸ್ಪರ್ಧಿಗಳು ಮನೆಯ ಒಳಗೆ ಹೋದಮೇಲೆ ಟೀಮ್‌ ಮಾಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಡುವಾಗಲೇ ನಾವೇ 2 ತಂಡ ಮಾಡಿ ಕಳುಹಿಸುತ್ತೇವೆ. ಇದು ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್‌ ತಿಳಿಸಿದ್ದಾರೆ.

ಇನ್ನೂ ತಮ್ಮ ನಿರೂಪಣೆ ಬಗ್ಗೆ ಇದ್ದ ವದಂತಿ ಬಗ್ಗೆ ಮಾತನಾಡಿದ ಅವರು, ಈ ಸೀಸನ್‌ ನಿರೂಪಣೆ ಮಾಡೋದು ಬೇಡ ಅಂತ ಯೋಚಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಕಳೆದ 10ವರ್ಷಗಳಿಂದ ಬಿಗ್‌ ಬಾಸ್‌ ಶೋ ನಿರೂಪಣೆ ಮಾಡುತ್ತಲೇ ಬಂದಿದ್ದೇನೆ. ಈ ಬಾರಿ ಬೇರೆಯವರು ನಿರೂಪಣೆ ಮಾಡಲಿ ಎಂದೇ ನಿರ್ಧರಿಸಿದ್ದೆ, ಹಾಗಂತ ವಾಹಿನಿಯ ಜೊತೆ ಒಡನಾಟ ಚೆನ್ನಾಗಿರಲಿಲ್ಲ ಅಂತ ಅಲ್ಲ. ತಂಡ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರತಿ ಬಾರಿ ಶೋ ಪ್ರಾರಂಭವಾಗ್ತಿದಂತೆ ನನ್ನ ಲೈಫ್‌ ಮ್ಯೂಟ್‌ ಆಗುತ್ತದೆ. ವಾರದಲ್ಲಿ 4ದಿನ ಹೊರ ಹೋಗುಬಹುದು ಅಷ್ಟೆ. ಬಿಗ್‌ ಬಾಸ್‌ ಶೋನ 90% ಜನ ನೋಡುತ್ತಾರೆ. ನಾನು ಕಾರ್ಯಕ್ರಮ ಮಾಡಲು ಇದು ಒಂದು ಕಾರಣ. ಸಿನಿಮಾದ ಜೊತೆ ಈ ಶೋನಿಂದ ಪ್ರೀತಿ ಸಿಕ್ಕಿದೆ. ಶೋ ಮಾಡುವಾಗ ಬಹಳ ಹೊತ್ತು ನಿಂತರೆ ಕಾಲು ನೋವು ಬರುತ್ತದೆ. ಎಲ್ಲವನ್ನೂ ನಿಭಾಹಿಸಿಕೊಂಡು ಮಾಡುತ್ತಿದ್ದೆ ಎಂದಿದ್ದಾರೆ.

ʻಬಿಗ್‌ ಬಾಸ್‌ ಸೀಸನ್‌ 11ʼ ರ ಸುದೀಪ್‌ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್‌ ಗ್ರ್ಯಾಂಡ್‌ ಆಗಿ ಲಾಂಚ್‌ ಆಗುತ್ತಿದೆ. ಪ್ರತಿದಿನ ರಾತ್ರಿ 9;30ಕ್ಕೆ ಶೋ ಪ್ರಸಾರವಾಗಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

14 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago