ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ಕ್ಕೆ ಕೌಂಟ್ಡೌನ್ ಶುರುವಾಗಿದ್ದು, ದೊಡ್ಮನೆಯ ಪ್ರೋಮೋ ರಿಲೀಸ್ ಆಗಿ ಮೆಚ್ಚುಗೆ ಗಳಿಸಿದೆ. ಬಿಗ್ ಬಾಸ್ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಹಲವಾರು ಇಂಟ್ರೆಸ್ಟಿಂಗ್ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಜತೆಗೆ ಈ ಬಾರಿಯ ಬಿಗ್ ಬಾಸ್ ನಲ್ಲಿ ಕಿಚ್ಚ ನಿರೂಪಣೆ ಮಾಡುತ್ತಾರಾ?ಇಲ್ವಾ? ಎನ್ನುವುದು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ಬಗ್ಗೆಯೂ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿಯ ಬಿಗ್ ಬಾಸ್ನಲ್ಲಿ ಸ್ವರ್ಗ ಮತ್ತು ನರಕ ಎಂಬ ಥೀಮ್ ಇರಲಿದೆ. ಇಲ್ಲಿಯವರೆಗೆ ಸ್ಪರ್ಧಿಗಳು ಮನೆಯ ಒಳಗೆ ಹೋದಮೇಲೆ ಟೀಮ್ ಮಾಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಡುವಾಗಲೇ ನಾವೇ 2 ತಂಡ ಮಾಡಿ ಕಳುಹಿಸುತ್ತೇವೆ. ಇದು ಈ ಸೀಸನ್ನ ಸ್ಪೆಷಾಲಿಟಿ ಎಂದು ಸುದೀಪ್ ತಿಳಿಸಿದ್ದಾರೆ.
ಇನ್ನೂ ತಮ್ಮ ನಿರೂಪಣೆ ಬಗ್ಗೆ ಇದ್ದ ವದಂತಿ ಬಗ್ಗೆ ಮಾತನಾಡಿದ ಅವರು, ಈ ಸೀಸನ್ ನಿರೂಪಣೆ ಮಾಡೋದು ಬೇಡ ಅಂತ ಯೋಚಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಕಳೆದ 10ವರ್ಷಗಳಿಂದ ಬಿಗ್ ಬಾಸ್ ಶೋ ನಿರೂಪಣೆ ಮಾಡುತ್ತಲೇ ಬಂದಿದ್ದೇನೆ. ಈ ಬಾರಿ ಬೇರೆಯವರು ನಿರೂಪಣೆ ಮಾಡಲಿ ಎಂದೇ ನಿರ್ಧರಿಸಿದ್ದೆ, ಹಾಗಂತ ವಾಹಿನಿಯ ಜೊತೆ ಒಡನಾಟ ಚೆನ್ನಾಗಿರಲಿಲ್ಲ ಅಂತ ಅಲ್ಲ. ತಂಡ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಪ್ರತಿ ಬಾರಿ ಶೋ ಪ್ರಾರಂಭವಾಗ್ತಿದಂತೆ ನನ್ನ ಲೈಫ್ ಮ್ಯೂಟ್ ಆಗುತ್ತದೆ. ವಾರದಲ್ಲಿ 4ದಿನ ಹೊರ ಹೋಗುಬಹುದು ಅಷ್ಟೆ. ಬಿಗ್ ಬಾಸ್ ಶೋನ 90% ಜನ ನೋಡುತ್ತಾರೆ. ನಾನು ಕಾರ್ಯಕ್ರಮ ಮಾಡಲು ಇದು ಒಂದು ಕಾರಣ. ಸಿನಿಮಾದ ಜೊತೆ ಈ ಶೋನಿಂದ ಪ್ರೀತಿ ಸಿಕ್ಕಿದೆ. ಶೋ ಮಾಡುವಾಗ ಬಹಳ ಹೊತ್ತು ನಿಂತರೆ ಕಾಲು ನೋವು ಬರುತ್ತದೆ. ಎಲ್ಲವನ್ನೂ ನಿಭಾಹಿಸಿಕೊಂಡು ಮಾಡುತ್ತಿದ್ದೆ ಎಂದಿದ್ದಾರೆ.
ʻಬಿಗ್ ಬಾಸ್ ಸೀಸನ್ 11ʼ ರ ಸುದೀಪ್ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದೆ. ಪ್ರತಿದಿನ ರಾತ್ರಿ 9;30ಕ್ಕೆ ಶೋ ಪ್ರಸಾರವಾಗಲಿದೆ.
ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…
ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…
ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…
ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…
ಬೆಂಗಳೂರು: ಸಚಿವ ಜಮೀರ್ ಅಹಮ್ಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…