ಮನರಂಜನೆ

ʼಬಿಗ್‌ ಬಾಸ್‌ ಸೀಸನ್‌ 11ʼ ಕುರಿತು ಕಿಚ್ಚ ಸುದೀಪ್‌ ಸುದ್ದಿಗೋಷ್ಠಿ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ದೊಡ್ಮನೆಯ ಪ್ರೋಮೋ ರಿಲೀಸ್‌ ಆಗಿ ಮೆಚ್ಚುಗೆ ಗಳಿಸಿದೆ. ಬಿಗ್‌ ಬಾಸ್‌ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್‌ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಹಲವಾರು ಇಂಟ್ರೆಸ್ಟಿಂಗ್‌ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಜತೆಗೆ ಈ ಬಾರಿಯ ಬಿಗ್‌ ಬಾಸ್‌ ನಲ್ಲಿ ಕಿಚ್ಚ ನಿರೂಪಣೆ ಮಾಡುತ್ತಾರಾ?ಇಲ್ವಾ? ಎನ್ನುವುದು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ಬಗ್ಗೆಯೂ ಕಿಚ್ಚ ಸುದೀಪ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಾರಿಯ ಬಿಗ್‌ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂಬ ಥೀಮ್‌ ಇರಲಿದೆ. ಇಲ್ಲಿಯವರೆಗೆ ಸ್ಪರ್ಧಿಗಳು ಮನೆಯ ಒಳಗೆ ಹೋದಮೇಲೆ ಟೀಮ್‌ ಮಾಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಡುವಾಗಲೇ ನಾವೇ 2 ತಂಡ ಮಾಡಿ ಕಳುಹಿಸುತ್ತೇವೆ. ಇದು ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್‌ ತಿಳಿಸಿದ್ದಾರೆ.

ಇನ್ನೂ ತಮ್ಮ ನಿರೂಪಣೆ ಬಗ್ಗೆ ಇದ್ದ ವದಂತಿ ಬಗ್ಗೆ ಮಾತನಾಡಿದ ಅವರು, ಈ ಸೀಸನ್‌ ನಿರೂಪಣೆ ಮಾಡೋದು ಬೇಡ ಅಂತ ಯೋಚಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಕಳೆದ 10ವರ್ಷಗಳಿಂದ ಬಿಗ್‌ ಬಾಸ್‌ ಶೋ ನಿರೂಪಣೆ ಮಾಡುತ್ತಲೇ ಬಂದಿದ್ದೇನೆ. ಈ ಬಾರಿ ಬೇರೆಯವರು ನಿರೂಪಣೆ ಮಾಡಲಿ ಎಂದೇ ನಿರ್ಧರಿಸಿದ್ದೆ, ಹಾಗಂತ ವಾಹಿನಿಯ ಜೊತೆ ಒಡನಾಟ ಚೆನ್ನಾಗಿರಲಿಲ್ಲ ಅಂತ ಅಲ್ಲ. ತಂಡ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರತಿ ಬಾರಿ ಶೋ ಪ್ರಾರಂಭವಾಗ್ತಿದಂತೆ ನನ್ನ ಲೈಫ್‌ ಮ್ಯೂಟ್‌ ಆಗುತ್ತದೆ. ವಾರದಲ್ಲಿ 4ದಿನ ಹೊರ ಹೋಗುಬಹುದು ಅಷ್ಟೆ. ಬಿಗ್‌ ಬಾಸ್‌ ಶೋನ 90% ಜನ ನೋಡುತ್ತಾರೆ. ನಾನು ಕಾರ್ಯಕ್ರಮ ಮಾಡಲು ಇದು ಒಂದು ಕಾರಣ. ಸಿನಿಮಾದ ಜೊತೆ ಈ ಶೋನಿಂದ ಪ್ರೀತಿ ಸಿಕ್ಕಿದೆ. ಶೋ ಮಾಡುವಾಗ ಬಹಳ ಹೊತ್ತು ನಿಂತರೆ ಕಾಲು ನೋವು ಬರುತ್ತದೆ. ಎಲ್ಲವನ್ನೂ ನಿಭಾಹಿಸಿಕೊಂಡು ಮಾಡುತ್ತಿದ್ದೆ ಎಂದಿದ್ದಾರೆ.

ʻಬಿಗ್‌ ಬಾಸ್‌ ಸೀಸನ್‌ 11ʼ ರ ಸುದೀಪ್‌ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್‌ ಗ್ರ್ಯಾಂಡ್‌ ಆಗಿ ಲಾಂಚ್‌ ಆಗುತ್ತಿದೆ. ಪ್ರತಿದಿನ ರಾತ್ರಿ 9;30ಕ್ಕೆ ಶೋ ಪ್ರಸಾರವಾಗಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನಕಲಿ ರಹದಾರಿ: ಕಠಿಣ ಶಿಕ್ಷೆ ವಿಧಿಸಿ

ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…

2 hours ago

ಓದುಗರ ಪತ್ರ: ಬ್ಯಾಂಕ್‌ಗಳ ವಿಶ್ವಾಸಾರ್ಹತೆಗೆ ಧಕ್ಕೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…

2 hours ago

ಓದುಗರ ಪತ್ರ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನಿಯೋಜಿಸಿ

ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…

2 hours ago

ಓದುಗರ ಪತ್ರ: ಬ್ಯಾಂಕ್ ಕನಿಷ್ಠ ಮೊತ್ತ ರದ್ದಾಗಲಿ

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…

2 hours ago

ಇಂದು ಕೆ.ಆರ್.ನಗರದಲ್ಲಿ ಆದಿಶಕ್ತಿ ತೋಪಮ್ಮ ಜಾತ್ರಾ ಮಹೋತ್ಸವ

ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…

3 hours ago

ಕೋಟೆ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಆಯ್ಕೆ ಖಚಿತ?

ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…

3 hours ago