ಮನರಂಜನೆ

ʼಬಿಗ್‌ ಬಾಸ್‌ ಸೀಸನ್‌ 11ʼ ಕುರಿತು ಕಿಚ್ಚ ಸುದೀಪ್‌ ಸುದ್ದಿಗೋಷ್ಠಿ

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 11ಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ದೊಡ್ಮನೆಯ ಪ್ರೋಮೋ ರಿಲೀಸ್‌ ಆಗಿ ಮೆಚ್ಚುಗೆ ಗಳಿಸಿದೆ. ಬಿಗ್‌ ಬಾಸ್‌ ನಿರೂಪಣೆಯ ಹೊಣೆ ಹೊತ್ತಿರುವ ಕಿಚ್ಚ ಸುದೀಪ್‌ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಹಲವಾರು ಇಂಟ್ರೆಸ್ಟಿಂಗ್‌ ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಜತೆಗೆ ಈ ಬಾರಿಯ ಬಿಗ್‌ ಬಾಸ್‌ ನಲ್ಲಿ ಕಿಚ್ಚ ನಿರೂಪಣೆ ಮಾಡುತ್ತಾರಾ?ಇಲ್ವಾ? ಎನ್ನುವುದು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಈ ಬಗ್ಗೆಯೂ ಕಿಚ್ಚ ಸುದೀಪ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಾರಿಯ ಬಿಗ್‌ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂಬ ಥೀಮ್‌ ಇರಲಿದೆ. ಇಲ್ಲಿಯವರೆಗೆ ಸ್ಪರ್ಧಿಗಳು ಮನೆಯ ಒಳಗೆ ಹೋದಮೇಲೆ ಟೀಮ್‌ ಮಾಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ಸ್ಪರ್ಧಿಗಳು ಮನೆಗೆ ಎಂಟ್ರಿ ಕೊಡುವಾಗಲೇ ನಾವೇ 2 ತಂಡ ಮಾಡಿ ಕಳುಹಿಸುತ್ತೇವೆ. ಇದು ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್‌ ತಿಳಿಸಿದ್ದಾರೆ.

ಇನ್ನೂ ತಮ್ಮ ನಿರೂಪಣೆ ಬಗ್ಗೆ ಇದ್ದ ವದಂತಿ ಬಗ್ಗೆ ಮಾತನಾಡಿದ ಅವರು, ಈ ಸೀಸನ್‌ ನಿರೂಪಣೆ ಮಾಡೋದು ಬೇಡ ಅಂತ ಯೋಚಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಕಳೆದ 10ವರ್ಷಗಳಿಂದ ಬಿಗ್‌ ಬಾಸ್‌ ಶೋ ನಿರೂಪಣೆ ಮಾಡುತ್ತಲೇ ಬಂದಿದ್ದೇನೆ. ಈ ಬಾರಿ ಬೇರೆಯವರು ನಿರೂಪಣೆ ಮಾಡಲಿ ಎಂದೇ ನಿರ್ಧರಿಸಿದ್ದೆ, ಹಾಗಂತ ವಾಹಿನಿಯ ಜೊತೆ ಒಡನಾಟ ಚೆನ್ನಾಗಿರಲಿಲ್ಲ ಅಂತ ಅಲ್ಲ. ತಂಡ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರತಿ ಬಾರಿ ಶೋ ಪ್ರಾರಂಭವಾಗ್ತಿದಂತೆ ನನ್ನ ಲೈಫ್‌ ಮ್ಯೂಟ್‌ ಆಗುತ್ತದೆ. ವಾರದಲ್ಲಿ 4ದಿನ ಹೊರ ಹೋಗುಬಹುದು ಅಷ್ಟೆ. ಬಿಗ್‌ ಬಾಸ್‌ ಶೋನ 90% ಜನ ನೋಡುತ್ತಾರೆ. ನಾನು ಕಾರ್ಯಕ್ರಮ ಮಾಡಲು ಇದು ಒಂದು ಕಾರಣ. ಸಿನಿಮಾದ ಜೊತೆ ಈ ಶೋನಿಂದ ಪ್ರೀತಿ ಸಿಕ್ಕಿದೆ. ಶೋ ಮಾಡುವಾಗ ಬಹಳ ಹೊತ್ತು ನಿಂತರೆ ಕಾಲು ನೋವು ಬರುತ್ತದೆ. ಎಲ್ಲವನ್ನೂ ನಿಭಾಹಿಸಿಕೊಂಡು ಮಾಡುತ್ತಿದ್ದೆ ಎಂದಿದ್ದಾರೆ.

ʻಬಿಗ್‌ ಬಾಸ್‌ ಸೀಸನ್‌ 11ʼ ರ ಸುದೀಪ್‌ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್‌ ಗ್ರ್ಯಾಂಡ್‌ ಆಗಿ ಲಾಂಚ್‌ ಆಗುತ್ತಿದೆ. ಪ್ರತಿದಿನ ರಾತ್ರಿ 9;30ಕ್ಕೆ ಶೋ ಪ್ರಸಾರವಾಗಲಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

51 mins ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

56 mins ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

1 hour ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

1 hour ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

1 hour ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

1 hour ago