kicha sudeep
ಕೆಲವು ತಿಂಗಳುಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಂದರ್ಭದಲ್ಲಿ, ಚಿತ್ರರಂಗದಲ್ಲಿ ಯಾರಿಗೆ ಹೇಗೆ ನಟ್ಟು ಬೋಲ್ಟ್ ಟೈಟ್ ಮಾಡಬೇಕು ಎನ್ನುವುದು ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಇದನ್ನು ಎಚ್ಚರಿಕೆ ಅಂತಾದರೂ ಅಂದುಕೊಳ್ಳಿ ಅಥವಾ ಮನವಿ ಎಂದಾದರೂ ತಿಳಿದುಕೊಳ್ಳಿ ಎಂದಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಕೆಲವು ನಟ-ನಟಿಯರು ಡಿಕೆಶಿ ವಿರುದ್ಧ ತಮ್ಮ ಬೇಸರವನ್ನು ಹೊರಹಾಕಿದ್ದರು.
ಈ ಕುರಿತು ಸುದೀಪ್ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಇದರಲ್ಲಿ ಡಿ.ಕೆ.ಶಿವಕುಮಾರ್ ಅವರ ತಪ್ಪಿಲ್ಲ, ಇದು ನಟ ಮತ್ತು ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಕಿತಾಪತಿ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ‘ಇದೆಲ್ಲಾ ಸಾಧು ಕೋಕಿಲ. ಇದರಲ್ಲಿ ಡಿಕೆ ಸಾಹೇಬರದ್ದು ಏನೂ ಇಲ್ಲ. ಚಿತ್ರರಂಗದವರು ಚಿತ್ರರಂಗದ ಕಾರ್ಯಕ್ರಮಕ್ಕೆ ಬರಲಿಲ್ಲ ಎಂಬ ಬೇಸರದಲ್ಲಿ ಅವರು ಮಾತನಾಡಿದ್ದರು. ಆದರೆ, ಎಲ್ಲರನ್ನೂ ಒಟ್ಟಿಗೆ ಕರೆದರೆ, ಸಂಭಾಳಿಸುವುದು ಹೇಗೆ? ಸೆಕ್ಯುರಿಟಿ ಕೊಡುವುದು ಹೇಗೆ? ಎಂದು ಬಹಳಷ್ಟು ಜನರನ್ನು ಕರೆದಿರಲಿಲ್ಲ. ಅದನ್ನ ಮೊದಲೇ ಅವರಿಗೆ ಹೇಳಬೇಕಿತ್ತು. ಅಲ್ಲಿ ಬಂದು ಮಾತನಾಡಿದಾಗ ಸೈಲೆಂಟ್ ಆಗಿದ್ದರು. ಇದು ಸಾಧು ಅವರದ್ದೇ ಕಿತಾಪತಿ. ವೈಯಕ್ತಿಕವಾಗಿ ಕಾರ್ಯಕ್ರಮಕ್ಕೆ ಕರೆದವರು ಬಂದಿದ್ದಾರೆ. ಕೆಲವರಿಗೆ ಬರೋಕಾಗಿಲ್ಲ’ ಎಂದರು.
ಇದರಲ್ಲಿ ಸಾಧು ಅವರದ್ದೂ ತಪ್ಪಿಲ್ಲ ಎಂದ ಸುದೀಪ್, ‘ಅವರು ಯಾವಾಗಲೂ ತಮಾಷೆ ಮಾಡಿಕೊಂಡೇ ಇರ್ತಾರೆ. ಇದನ್ನೂ ತಮಾಷೆಯಾಗೇ ಹೇಳಿದ್ದಾರೆ. ಆದರೆ, ಅದು ಗಂಭೀರವಾಯ್ತು’ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…