ಬೆಂಗಳೂರು : ಕನ್ನಡ ಬಿಗ್ಬಾಸ್ ಸೀಸನ್ 12ರ ಇಂದಿನ ವೀಕೆಂಡ್ ಎಪಿಸೋಡ್ಗೆ ಇಡೀ ಕರ್ನಾಟಕ ಜನತೆ ಕಾಯುತ್ತಿದೆ. ಈ ವಾರ ದೊಡ್ಮನೆಯೊಳಗೆ ಸಾಕಷ್ಟು ಘಟನೆಗಳು ನಡೆದಿವೆ. ಮುಖ್ಯವಾಗಿ ದೆವ್ವದ ಮ್ಯಾಟರ್ ವಾರಪೂರ್ತಿ ಮನೆಯೊಳಗೆ ಸೌಂಡ್ ಮಾಡಿತ್ತು. ತನ್ನಪಾಡಿಗಿದ್ದ ರಕ್ಷಿತಾ ಶೆಟ್ಟಿ ಅವರನ್ನು ಅಶ್ವಿನಿ ಗೌಡ ಹಾಗೂ ಜಾನ್ವಿ ಈ ದೆವ್ವದ ಮ್ಯಾಟರ್ ಒಳಗೆ ಕರೆತಂದು ಅತಂತ್ರ ಮಾಡಿಬಿಟ್ಟರು. ಇಲ್ಲಿಗೆ ನಿಲ್ಲದ ಅಶ್ವಿನಿ-ಜಾನ್ವಿ ಆಟ ರಕ್ಷಿತಾಗೆ ಅವಮಾನ ಆಗುವಂತೆ ನಡೆದುಕೊಂಡರು. ಈ ಎಲ್ಲ ವಿಚಾರದಿಂದ ಕಿಚ್ಚ ಸುದೀಪ್ ಕೆರಳಿ ಕೆಂಡವಾಗಿದ್ದಾರೆ.
ಅಶ್ವಿನಿ ಹಾಗೂ ಜಾನ್ವಿ ಅವರು ಬಿಗ್ ಬಾಸ್ ಮನೆಯಲ್ಲಿ ಗೆಜ್ಜೆ ಶಬ್ದ ಮಾಡಿ, ಅದನ್ನು ರಕ್ಷಿತಾ ಮೇಲೆ ಹಾಕಿದ್ದರು. ರಕ್ಷಿತಾ ನಾಗವಲ್ಲಿ ರೀತಿ ಆಡ್ತಾರೆ ಎಂದೆಲ್ಲ ಸುಳ್ಳು ಆರೋಪ ಮಾಡಿದ್ದರು. ಇದೇ ವಿಚಾರ ಇಟ್ಟುಕೊಂಡ ವಾರ ಪೂರ್ತಿ ಎಳೆದಾಡಿದ್ದರು. ರಕ್ಷಿತಾಗೆ ಪದೇ ಪದೇ ಕಿರುಕುಳ ಕೊಡುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲದೆ ರಕ್ಷಿತಾಗೆ ಈಡಿಯೆಟ್, ಮುಚ್ಕೊಂಡು ಮಲ್ಕೋ ಎಂಬ ಪದವನ್ನೆಲ್ಲ ಉಪಯೋಗಿಸಿದ್ದಾರೆ.
ಇದೀಗ ಇಂದಿನ ಪ್ರೋಮೋ ಬಿಡುಗಡೆಯಾಗಿದೆ. ‘‘ನಾವು ಕೊಟ್ಟಿರೋ ಮಾತನ್ನು ತಪ್ಪಲ್ಲ, ತಪ್ಪಾಗಿ ಆಡಿರೋ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ. ಒಳ್ಳೆಯ ಕೆಲಸ ಮಾಡಿದಾಗ ನಾವು ಕೈ ತಟ್ಟಿ ಚಪ್ಪಾಳೆಯನ್ನು ಸಹ ಕೊಡ್ತೀವಿ. ಎಲ್ಲಿದ್ದೀವಿ ಅನ್ನೋದನ್ನು ಮರೆತು ಬಾಯಿಗೆ ಬಂದ ಹಾಗೆ ಮಾತಾಡಿದವರಿಗೆ ಚೂರು ತಲೆ ಮೇಲೆ ತಟ್ಟಿ ಬುದ್ದಿ ಹೇಳಬೇಕಾಗುತ್ತದೆ’’ ಎಂದು ಸುದೀಪ್ ಹೇಳಿ ವಿಷಯ ಕೈಗೆತ್ತಿಕೊಂಡಿದ್ದಾರೆ.
ಅಶ್ವಿನಿ ಅವರೆ ನಿಮ್ಮ ಸ್ಟೇಟ್ಮೆಂಟ್ ಹೇಳ್ತಾ ಹೋಗ್ತೀನಿ, ಇದನ್ನ ನೋಡಿದ್ರೆ ಹೇಳಬಹುದು ಇಲ್ಲಿಂದ ಬಂದಿದ್ಯಾ ನೀನು.. ಕಾರ್ಟೂನ್.. ಈ ಯಮ್ಮ ಅಂದಾಕ್ಷಣ ನೀವು ನನ್ನನ್ನ ಯಮ್ಮ.. ಗಿಮ್ಮ ಅಂತ ಕರೀಬೇಡಿ ನನ್ಗೆ ಒಂದು ಹೆಸರು ಇದೆ ಅಂತ ಹೇಳ್ತೀರ.. ಆದ್ರೆ ನೀವು ಅವರನ್ನು ಈಡಿಯೆಟ್ ಅಂತೀರಿ. ತಮಾಷೆ ಮಾಡ್ಕೊಂಡು ನಿಮ್ಮ ಪರ್ಸನಾಲಿಟಿಯನ್ನು ಕೊಲೆ ಮಾಡ್ತಾ ಇದ್ದೀರಾ.. ಒಬ್ಬರ ಮರಿಯಾದೆ.. ಒಬ್ಬರ ಅಸ್ತಿತ್ವ.. ಒಬ್ಬನ ಗೌರವ. ಇನ್ನೊಬ್ಬನ ಆಸ್ತಿ ಆಟಸಾಮಾನು ಆಗಬಾರದು.. ಯಾರ ಅಪ್ಪನ ಆಸ್ತಿನೂ ಅಲ್ಲ ಅದು’’ ಎಂದು ಕಿಚ್ಚ ಸುದೀಪ್ ಖಡಕ್ ಆಗಿ ಹೇಳಿದ್ದಾರೆ.
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…