ಮನರಂಜನೆ

ವಾರದ ಪಂಚಾಯಿತಿಗೆ ಕಿಚ್ಚನ ಆಗಮನ : ಹಿಡಿದ ದೆವ್ವ ಬಿಡಿಸಿದ ಸುದೀಪ್..‌

ಬೆಂಗಳೂರು : ಕನ್ನಡ ಬಿಗ್‌ಬಾಸ್‌ ಸೀಸನ್‌ 12ರ ಇಂದಿನ ವೀಕೆಂಡ್ ಎಪಿಸೋಡ್ಗೆ ಇಡೀ ಕರ್ನಾಟಕ ಜನತೆ ಕಾಯುತ್ತಿದೆ. ಈ ವಾರ ದೊಡ್ಮನೆಯೊಳಗೆ ಸಾಕಷ್ಟು ಘಟನೆಗಳು ನಡೆದಿವೆ. ಮುಖ್ಯವಾಗಿ ದೆವ್ವದ ಮ್ಯಾಟರ್ ವಾರಪೂರ್ತಿ ಮನೆಯೊಳಗೆ ಸೌಂಡ್ ಮಾಡಿತ್ತು. ತನ್ನಪಾಡಿಗಿದ್ದ ರಕ್ಷಿತಾ ಶೆಟ್ಟಿ ಅವರನ್ನು ಅಶ್ವಿನಿ ಗೌಡ ಹಾಗೂ ಜಾನ್ವಿ ಈ ದೆವ್ವದ ಮ್ಯಾಟರ್ ಒಳಗೆ ಕರೆತಂದು ಅತಂತ್ರ ಮಾಡಿಬಿಟ್ಟರು. ಇಲ್ಲಿಗೆ ನಿಲ್ಲದ ಅಶ್ವಿನಿ-ಜಾನ್ವಿ ಆಟ ರಕ್ಷಿತಾಗೆ ಅವಮಾನ ಆಗುವಂತೆ ನಡೆದುಕೊಂಡರು. ಈ ಎಲ್ಲ ವಿಚಾರದಿಂದ ಕಿಚ್ಚ ಸುದೀಪ್ ಕೆರಳಿ ಕೆಂಡವಾಗಿದ್ದಾರೆ.

ಅಶ್ವಿನಿ ಹಾಗೂ ಜಾನ್ವಿ ಅವರು ಬಿಗ್ ಬಾಸ್ ಮನೆಯಲ್ಲಿ ಗೆಜ್ಜೆ ಶಬ್ದ ಮಾಡಿ, ಅದನ್ನು ರಕ್ಷಿತಾ ಮೇಲೆ ಹಾಕಿದ್ದರು. ರಕ್ಷಿತಾ ನಾಗವಲ್ಲಿ ರೀತಿ ಆಡ್ತಾರೆ ಎಂದೆಲ್ಲ ಸುಳ್ಳು ಆರೋಪ ಮಾಡಿದ್ದರು. ಇದೇ ವಿಚಾರ ಇಟ್ಟುಕೊಂಡ ವಾರ ಪೂರ್ತಿ ಎಳೆದಾಡಿದ್ದರು. ರಕ್ಷಿತಾಗೆ ಪದೇ ಪದೇ ಕಿರುಕುಳ ಕೊಡುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲದೆ ರಕ್ಷಿತಾಗೆ ಈಡಿಯೆಟ್, ಮುಚ್ಕೊಂಡು ಮಲ್ಕೋ ಎಂಬ ಪದವನ್ನೆಲ್ಲ ಉಪಯೋಗಿಸಿದ್ದಾರೆ.

ಇದೀಗ ಇಂದಿನ ಪ್ರೋಮೋ ಬಿಡುಗಡೆಯಾಗಿದೆ. ‘‘ನಾವು ಕೊಟ್ಟಿರೋ ಮಾತನ್ನು ತಪ್ಪಲ್ಲ, ತಪ್ಪಾಗಿ ಆಡಿರೋ ಮಾತಿಗೆ ಬುದ್ಧಿ ಕಲಿಸದೇ ಬಿಡಲ್ಲ. ಒಳ್ಳೆಯ ಕೆಲಸ ಮಾಡಿದಾಗ ನಾವು ಕೈ ತಟ್ಟಿ ಚಪ್ಪಾಳೆಯನ್ನು ಸಹ ಕೊಡ್ತೀವಿ. ಎಲ್ಲಿದ್ದೀವಿ ಅನ್ನೋದನ್ನು ಮರೆತು ಬಾಯಿಗೆ ಬಂದ ಹಾಗೆ ಮಾತಾಡಿದವರಿಗೆ ಚೂರು ತಲೆ ಮೇಲೆ ತಟ್ಟಿ ಬುದ್ದಿ ಹೇಳಬೇಕಾಗುತ್ತದೆ’’ ಎಂದು ಸುದೀಪ್ ಹೇಳಿ ವಿಷಯ ಕೈಗೆತ್ತಿಕೊಂಡಿದ್ದಾರೆ.

ಅಶ್ವಿನಿ ಅವರೆ ನಿಮ್ಮ ಸ್ಟೇಟ್ಮೆಂಟ್ ಹೇಳ್ತಾ ಹೋಗ್ತೀನಿ, ಇದನ್ನ ನೋಡಿದ್ರೆ ಹೇಳಬಹುದು ಇಲ್ಲಿಂದ ಬಂದಿದ್ಯಾ ನೀನು.. ಕಾರ್ಟೂನ್.. ಈ ಯಮ್ಮ ಅಂದಾಕ್ಷಣ ನೀವು ನನ್ನನ್ನ ಯಮ್ಮ.. ಗಿಮ್ಮ ಅಂತ ಕರೀಬೇಡಿ ನನ್ಗೆ ಒಂದು ಹೆಸರು ಇದೆ ಅಂತ ಹೇಳ್ತೀರ.. ಆದ್ರೆ ನೀವು ಅವರನ್ನು ಈಡಿಯೆಟ್ ಅಂತೀರಿ. ತಮಾಷೆ ಮಾಡ್ಕೊಂಡು ನಿಮ್ಮ ಪರ್ಸನಾಲಿಟಿಯನ್ನು ಕೊಲೆ ಮಾಡ್ತಾ ಇದ್ದೀರಾ.. ಒಬ್ಬರ ಮರಿಯಾದೆ.. ಒಬ್ಬರ ಅಸ್ತಿತ್ವ.. ಒಬ್ಬನ ಗೌರವ. ಇನ್ನೊಬ್ಬನ ಆಸ್ತಿ ಆಟಸಾಮಾನು ಆಗಬಾರದು.. ಯಾರ ಅಪ್ಪನ ಆಸ್ತಿನೂ ಅಲ್ಲ ಅದು’’ ಎಂದು ಕಿಚ್ಚ ಸುದೀಪ್ ಖಡಕ್ ಆಗಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

3 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

3 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

3 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

3 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

3 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

3 hours ago