ಮನರಂಜನೆ

ಕಿಚ್ಚು ಹಚ್ಚಿದ್ರಾ ಕಿಚ್ಚ….

ಬೆಂಗ‌ಳೂರು: ಸದ್ಯ ನಟ ಕಿಚ್ಚ ಸುದೀಪ್‌ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅವರು ಜಯನಗರ ಎಂಇಎಸ್‌ ಮೈದಾನದಲ್ಲಿ ಕಾರ್ಯಕ್ರಮ ನಡೆಸಿ, ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ಕಿಚ್ಚ ಸುದೀಪ್‌, ನಾನು ಸಂಪಾದನೆ ಮಾಡಿರುವ ಅಭಿಮಾನಿಗಳು ನನ್ನ ಹೆಸರಿಗೆ ಕಳಂಕ ತರುವಂತಹ ಯಾವ ಕೆಲಸವನು ಮಾಡಿಲ್ಲ, ಮುಂದೆಯೋ ಮಾಡಲ್ಲ. ನಾನು ಕೂಡ ಮಾಡಲ್ಲ. ಇದು ಸಮಾಜಕ್ಕೆ ತುಂಬಾನೇ ಮುಖ್ಯ ಆಗುತ್ತದೆ ಎಂದು ಹೇಳಿದ್ದಾರೆ.

ಸಿನಿಮಾ ಎಲ್ಲಾರೂ ಮಾಡುತ್ತಾರೆ. ದೊಡ್ಡ ದೊಡ್ಡ ಕಲಾವಿದರೂ ಇದ್ದಾರೆ. ಅವರು ಒಳ್ಳೊಳ್ಳೆ ಸಿನಿಮಾ ಕೊಡುತ್ತಾರೆ, ಯಶಸ್ಸು ಕಾಣುತ್ತಾರೆ ಎಂದರು.

ಇನ್ನು ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕು ಎಂದರೆ ಬರೀ ಸಿನಿಮಾ ಮಾಡಿದರೆ ಸಾಕಾಗುವುದಿಲ್ಲ. ಕುಟುಂಬ, ಸ್ನೇಹಿತರು, ಅಭಿಮಾನಿಗಳು ನನ್ನೊಂದಿಗೆ ಚೆನ್ನಾಗಿದ್ದಾರೆ. ಅಲ್ಲದೆ, ನಾನು ತಪ್ಪಿ ನಡೆದಾನ ಮಾಧ್ಯಮ ಮಿತ್ರರು ತಿದ್ದಿದ್ದಾರೆ. ಇವರೆಲ್ಲ ನನ್ನ ಜೀವನದಲ್ಲಿ ಚೆನ್ನಾಗಿದ್ದಾರೆ. ಆದ್ರಿಂದ ಇವತ್ತು ನಾನು ಕೂಡ ಚೆನ್ನಾಗಿ ಬೆಳೆದಿದ್ದೇನೆ ಎಂದು ಕಿಚ್ಚ ಸುದೀಪ್‌ ಹೇಳಿದರು.

ಇನ್ನೂ ತಮ್ಮ ಮಾತಿನುದ್ದಕ್ಕೂ ನನ್ನ ಫ್ಯಾನ್ಸ್‌ ಫ್ಯಾನ್ಸ್‌ ಎಂದು ನಟ ದರ್ಶನ್‌ರನ್ನು ಕಾಲೆಳೆದರ? ಜೊತೆಗೆ ದಾಸನ ಅಭಿಮಾನಿಗಳಿಗೆ ನೀತಿಪಾಠ ಮಾಡಿದ್ರಾ? ಅನ್ನೋ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago