ಮನರಂಜನೆ

ಸುದೀಪ್‌ ಅಭಿನಯದ ಹೊಸ ಚಿತ್ರ ಪ್ರಾರಂಭ; ಇದು ‘ಮ್ಯಾಕ್ಸ್ 2’ ಅಲ್ಲ

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍, ‘ಮ್ಯಾಕ್ಸ್ 2’ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಚಿತ್ರದ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಿದ್ದು, ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಸುದೀಪ್‌ ಹಾಗೂ ವಿಜಯ್‌ ಕಾರ್ತಿಕೇಯ, ‘ಮ್ಯಾಕ್ಸ್‌ 2’ ಚಿತ್ರವನ್ನು ಪಕ್ಕಕ್ಕಿಟ್ಟು, ಅದರ ಬದಲು ಇನ್ನೊಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರವು ಸುದೀಪ್‍ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ. ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಸತ್ಯಜ್ಯೋತಿ ಫಿಲಂಸ್‍ ನಿರ್ಮಾಣ ಮಾಡುತ್ತಿದೆ.

ಇದಕ್ಕೂ ಮೊದಲು ಸುದೀಪ್‍ ಅಭಿನಯದ 47ನೇ ಚಿತ್ರವನ್ನು ಸತ್ಯಜ್ಯೋತಿ ಫಿಲಂಸ್‍ ನಿರ್ಮಾಣ ಮಾಡಿ, ತಮಿಳಿನ ಜನಪ್ರಿಯ ನಿರ್ದೇಶಕ ಚೇರನ್‍ ನಿರ್ದೇಶನ ಮಾಡಬೇಕಿತ್ತು. ಆದರೆ, ಚೇರನ್‍ ಚಿತ್ರ ಮುಂದೆ ಹೋದ ಕಾರಣ, ಅದರ ಬದಲು ವಿಜಯ್‍ ಕಾರ್ತಿಕೇಯ ನಿರ್ದೇಶನದ ಚಿತ್ರ ಮೊದಲು ಪ್ರಾರಂಭವಾಗಲಿದೆ. ಈ ಹಿಂದೆ ವಿಷ್ಣುವರ್ಧನ್ ಜೊತೆ ಸತ್ಯಜ್ಯೋತಿ ಫಿಲಂಸ್‍ ಸಂಸ್ಥೆಯು, ‘ಸತ್ಯಜ್ಯೋತಿ’ ಚಿತ್ರವನ್ನು ನಿರ್ಮಿಸಿತ್ತು. ಈಗ 39 ವರ್ಷಗಳ ನಂತರ ಸಂಸ್ಥೆಯು ಮತ್ತೆ ಕನ್ನಡ ಚಿತ್ರ ನಿರ್ಮಾಣಕ್ಕೆ ಕೈ ಹಾಕಿದೆ.

ಚಿತ್ರದ ಕುರಿತು ಮಾತನಾಡಿದ ಸುದೀಪ್‌, ‘’ಮ್ಯಾಕ್ಸ್’ ನಂತರ ನಾನು ಮತ್ತು ವಿಜಯ್‍ ಕಾರ್ತಿಕೇಯ ಮತ್ತೆ ಒಂದಾಗಿದ್ದೇವೆ. ಸದ್ಯಕ್ಕೆ ‘ಮ್ಯಾಕ್ಸ್ 2’ ಸಿನಿಮಾ ಕೈ ಬಿಟ್ಟಿದ್ದೇವಿ. ಈ‌ ವರ್ಷ ಎರಡು ಸಿನಿಮಾ ಮಾಡುತ್ತೇವೆ. ‘ಬಿಲ್ಲ ರಂಗ ಬಾಷ’ ಚಿತ್ರವು ಈ ವರ್ಷ ಬಿಡುಗಡೆ ಆಗುವುದಿಲ್ಲ. ಈ ಸಿನಿಮಾ ಇದೇ ವರ್ಷ ಡಿಸೆಂಬರ್ 25ಕ್ಕೆ ರಿಲೀಸ್ ಮಾಡುತ್ತೇವೆ. ಸೆಪ್ಟೆಂಬರ್ ಕೊನೆಯಲ್ಲಿ ‘ಬಿಗ್ ಬಾಸ್’ ಶುರು ಆಗಲಿದೆ’ ಎಂದು ಸುದೀಪ್‍ ಹೇಳಿದ್ದಾರೆ.

ಈ ಚಿತ್ರಕ್ಕೆ ಅಜನೀಶ್ ಲೋಕನಾಥ್‍ ಸಂಗೀತ ಸಂಯೋಜಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

15 mins ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

11 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

11 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

11 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

11 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

11 hours ago