ಮನರಂಜನೆ

ಸುದೀಪ್‌ ಅಭಿನಯದ ‘K 47’ ಚೆನ್ನೈನಲ್ಲಿ ಪ್ರಾರಂಭ

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್‍, ಪ್ರಿಯಾ ಸುದೀಪ್‍, ವಿಜಯ್‍ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್‍ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ.

ಇದು ‘ಮ್ಯಾಕ್ಸ್’ ಚಿತ್ರದ ಪ್ರೀಕ್ವೆಲ್‍ ಆಗಿದ್ದು, ಚಿತ್ರಕ್ಕೆ ‘ಮ್ಯಾಕ್ಸ್ 2’ ಎಂಬ ಹೆಸರಿಡಲಾಗಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಇದು ‘ಮ್ಯಾಕ್ಸ್ 2’ ಅಲ್ಲ ಎಂದು ಸುದೀಪ್‍ ಸ್ಪಷ್ಟಪಡಿಸಿದ್ದಾರೆ. ‘ಇದು ಬೇರೆಯದೇ ಪಾತ್ರ. ಬೇರೆಯದೇ ವ್ಯಕ್ತಿತ್ವ. ‘ಮ್ಯಾಕ್ಸ್’ನ ಅರ್ಜುನ್‍ ಮಹಾಕ್ಷಯ್ ಪಾತ್ರಕ್ಕಿಂತ ವಿಭಿನ್ನವಾದದ್ದು. ಈ ಪಾತ್ರ ಮುತ್ತತ್ತಿ ಸತ್ಯರಾಜು ಪಾತ್ರದಂತಿದೆ. ಹಾಗಾಗಿ, ‘ಮ್ಯಾಕ್ಸ್ 2’ ಚಿತ್ರವನ್ನು ಸದ್ಯಕ್ಕೆ ಕೈಬಿಟ್ಟು, ಬೇರೆಯದೇ ಹೊಸ ಚಿತ್ರ ಮಾಡುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ.

‘ಮ್ಯಾಕ್ಸ್’ ತರಹ ಈ ಚಿತ್ರದಲ್ಲೂ ಸುದೀಪ್‍ಗೆ ನಾಯಕಿ ಇರುವುದಿಲ್ಲವಂತೆ. ಈ ಬಗ್ಗೆ ಮಾತನಾಡಿರುವ ಸುದೀಪ್‍, ‘ಚಿತ್ರದಲ್ಲಿ ಒಂದು ನಾಯಕಿ ಪಾತ್ರ ಇತ್ತು. ಆದರೆ, ಕಥೆಯ ಓಟಕ್ಕೆ ನಾಯಕಿ ಮತ್ತು ಆಕೆಯ ದೃಶ್ಯಗಳ ಅವಶ್ಯಕತೆ ಇಲ್ಲ ಎಂದನಿಸಿದ್ದರಿಂದ ಆ ಪಾತ್ರವನ್ನು ಕೈಬಿಟ್ಟಿದ್ದೇವೆ. ನಾಯಕಿ ಪಾತ್ರವನ್ನು ಸುಮ್ಮನೆ ತುರುಕಬಾರದು. ಚಿತ್ರದಲ್ಲಿ ನಾಯಕಿ ಇರಬೇಕೆಂದರೆ ಒಳ್ಳೆಯ ಪಾತ್ರ ಇರಬೇಕು. ಕೆಲವೊಮ್ಮೆ ಆ ಪಾತ್ರಕ್ಕೆ ನ್ಯಾಯ ಸಲ್ಲಿಸುವುದಕ್ಕೆ ಆಗುವುದಿಲ್ಲ. ಹಾಗಾಗಿ, ನಾಯಕಿ ಪಾತ್ರವನ್ನು ಬಿಟ್ಟಿದ್ದೇವೆ’ ಎಂದಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಸತ್ಯಜ್ಯೋತಿ ಫಿಲಂಸ್‍ ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ವಿಜಯ್‍ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್‍ ಸಂಗೀತ ಮತ್ತು ಶೇಖರ್‍ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

2 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

3 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

3 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

3 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

4 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

4 hours ago