ಮನರಂಜನೆ

ಸುದೀಪ್‌ ಅಭಿನಯದ ‘K 47’ ಚೆನ್ನೈನಲ್ಲಿ ಪ್ರಾರಂಭ

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್‍, ಪ್ರಿಯಾ ಸುದೀಪ್‍, ವಿಜಯ್‍ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್‍ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ.

ಇದು ‘ಮ್ಯಾಕ್ಸ್’ ಚಿತ್ರದ ಪ್ರೀಕ್ವೆಲ್‍ ಆಗಿದ್ದು, ಚಿತ್ರಕ್ಕೆ ‘ಮ್ಯಾಕ್ಸ್ 2’ ಎಂಬ ಹೆಸರಿಡಲಾಗಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಇದು ‘ಮ್ಯಾಕ್ಸ್ 2’ ಅಲ್ಲ ಎಂದು ಸುದೀಪ್‍ ಸ್ಪಷ್ಟಪಡಿಸಿದ್ದಾರೆ. ‘ಇದು ಬೇರೆಯದೇ ಪಾತ್ರ. ಬೇರೆಯದೇ ವ್ಯಕ್ತಿತ್ವ. ‘ಮ್ಯಾಕ್ಸ್’ನ ಅರ್ಜುನ್‍ ಮಹಾಕ್ಷಯ್ ಪಾತ್ರಕ್ಕಿಂತ ವಿಭಿನ್ನವಾದದ್ದು. ಈ ಪಾತ್ರ ಮುತ್ತತ್ತಿ ಸತ್ಯರಾಜು ಪಾತ್ರದಂತಿದೆ. ಹಾಗಾಗಿ, ‘ಮ್ಯಾಕ್ಸ್ 2’ ಚಿತ್ರವನ್ನು ಸದ್ಯಕ್ಕೆ ಕೈಬಿಟ್ಟು, ಬೇರೆಯದೇ ಹೊಸ ಚಿತ್ರ ಮಾಡುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ.

‘ಮ್ಯಾಕ್ಸ್’ ತರಹ ಈ ಚಿತ್ರದಲ್ಲೂ ಸುದೀಪ್‍ಗೆ ನಾಯಕಿ ಇರುವುದಿಲ್ಲವಂತೆ. ಈ ಬಗ್ಗೆ ಮಾತನಾಡಿರುವ ಸುದೀಪ್‍, ‘ಚಿತ್ರದಲ್ಲಿ ಒಂದು ನಾಯಕಿ ಪಾತ್ರ ಇತ್ತು. ಆದರೆ, ಕಥೆಯ ಓಟಕ್ಕೆ ನಾಯಕಿ ಮತ್ತು ಆಕೆಯ ದೃಶ್ಯಗಳ ಅವಶ್ಯಕತೆ ಇಲ್ಲ ಎಂದನಿಸಿದ್ದರಿಂದ ಆ ಪಾತ್ರವನ್ನು ಕೈಬಿಟ್ಟಿದ್ದೇವೆ. ನಾಯಕಿ ಪಾತ್ರವನ್ನು ಸುಮ್ಮನೆ ತುರುಕಬಾರದು. ಚಿತ್ರದಲ್ಲಿ ನಾಯಕಿ ಇರಬೇಕೆಂದರೆ ಒಳ್ಳೆಯ ಪಾತ್ರ ಇರಬೇಕು. ಕೆಲವೊಮ್ಮೆ ಆ ಪಾತ್ರಕ್ಕೆ ನ್ಯಾಯ ಸಲ್ಲಿಸುವುದಕ್ಕೆ ಆಗುವುದಿಲ್ಲ. ಹಾಗಾಗಿ, ನಾಯಕಿ ಪಾತ್ರವನ್ನು ಬಿಟ್ಟಿದ್ದೇವೆ’ ಎಂದಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಸತ್ಯಜ್ಯೋತಿ ಫಿಲಂಸ್‍ ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ವಿಜಯ್‍ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್‍ ಸಂಗೀತ ಮತ್ತು ಶೇಖರ್‍ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

10 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

13 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

13 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

13 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

13 hours ago