ಮನರಂಜನೆ

ಸುದೀಪ್‌ ಅಭಿನಯದ ‘K 47’ ಚೆನ್ನೈನಲ್ಲಿ ಪ್ರಾರಂಭ

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್‍, ಪ್ರಿಯಾ ಸುದೀಪ್‍, ವಿಜಯ್‍ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್‍ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ.

ಇದು ‘ಮ್ಯಾಕ್ಸ್’ ಚಿತ್ರದ ಪ್ರೀಕ್ವೆಲ್‍ ಆಗಿದ್ದು, ಚಿತ್ರಕ್ಕೆ ‘ಮ್ಯಾಕ್ಸ್ 2’ ಎಂಬ ಹೆಸರಿಡಲಾಗಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಇದು ‘ಮ್ಯಾಕ್ಸ್ 2’ ಅಲ್ಲ ಎಂದು ಸುದೀಪ್‍ ಸ್ಪಷ್ಟಪಡಿಸಿದ್ದಾರೆ. ‘ಇದು ಬೇರೆಯದೇ ಪಾತ್ರ. ಬೇರೆಯದೇ ವ್ಯಕ್ತಿತ್ವ. ‘ಮ್ಯಾಕ್ಸ್’ನ ಅರ್ಜುನ್‍ ಮಹಾಕ್ಷಯ್ ಪಾತ್ರಕ್ಕಿಂತ ವಿಭಿನ್ನವಾದದ್ದು. ಈ ಪಾತ್ರ ಮುತ್ತತ್ತಿ ಸತ್ಯರಾಜು ಪಾತ್ರದಂತಿದೆ. ಹಾಗಾಗಿ, ‘ಮ್ಯಾಕ್ಸ್ 2’ ಚಿತ್ರವನ್ನು ಸದ್ಯಕ್ಕೆ ಕೈಬಿಟ್ಟು, ಬೇರೆಯದೇ ಹೊಸ ಚಿತ್ರ ಮಾಡುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ.

‘ಮ್ಯಾಕ್ಸ್’ ತರಹ ಈ ಚಿತ್ರದಲ್ಲೂ ಸುದೀಪ್‍ಗೆ ನಾಯಕಿ ಇರುವುದಿಲ್ಲವಂತೆ. ಈ ಬಗ್ಗೆ ಮಾತನಾಡಿರುವ ಸುದೀಪ್‍, ‘ಚಿತ್ರದಲ್ಲಿ ಒಂದು ನಾಯಕಿ ಪಾತ್ರ ಇತ್ತು. ಆದರೆ, ಕಥೆಯ ಓಟಕ್ಕೆ ನಾಯಕಿ ಮತ್ತು ಆಕೆಯ ದೃಶ್ಯಗಳ ಅವಶ್ಯಕತೆ ಇಲ್ಲ ಎಂದನಿಸಿದ್ದರಿಂದ ಆ ಪಾತ್ರವನ್ನು ಕೈಬಿಟ್ಟಿದ್ದೇವೆ. ನಾಯಕಿ ಪಾತ್ರವನ್ನು ಸುಮ್ಮನೆ ತುರುಕಬಾರದು. ಚಿತ್ರದಲ್ಲಿ ನಾಯಕಿ ಇರಬೇಕೆಂದರೆ ಒಳ್ಳೆಯ ಪಾತ್ರ ಇರಬೇಕು. ಕೆಲವೊಮ್ಮೆ ಆ ಪಾತ್ರಕ್ಕೆ ನ್ಯಾಯ ಸಲ್ಲಿಸುವುದಕ್ಕೆ ಆಗುವುದಿಲ್ಲ. ಹಾಗಾಗಿ, ನಾಯಕಿ ಪಾತ್ರವನ್ನು ಬಿಟ್ಟಿದ್ದೇವೆ’ ಎಂದಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಸತ್ಯಜ್ಯೋತಿ ಫಿಲಂಸ್‍ ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ವಿಜಯ್‍ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್‍ ಸಂಗೀತ ಮತ್ತು ಶೇಖರ್‍ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

3 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

3 hours ago

ಓದುಗರ ಪತ್ರ: ವಿದ್ಯುತ್ ವಿತರಣೆ ಖಾಸಗೀಕರಣ ಸಲ್ಲದು

ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…

3 hours ago

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

6 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

6 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

6 hours ago