ಮನರಂಜನೆ

ಸುದೀಪ್‌ ಅಭಿನಯದ ‘K 47’ ಚೆನ್ನೈನಲ್ಲಿ ಪ್ರಾರಂಭ

‘ಮ್ಯಾಕ್ಸ್’ ನಿರ್ದೇಶಕ ವಿಜಯ್‍ ಕಾರ್ತಿಕೇಯ ನಿರ್ದೇಶನದಲ್ಲಿ ಸುದೀಪ್‍ ಅಭಿನಯಿಸುತ್ತಿರುವ ಹೊಸ ಚಿತ್ರದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದೆ. ಈ ಸಂದರ್ಭದಲ್ಲಿ ಸುದೀಪ್‍, ಪ್ರಿಯಾ ಸುದೀಪ್‍, ವಿಜಯ್‍ ಕಾರ್ತಿಕೇಯ ಮುಂತಾದವರು ಹಾಜರಿದ್ದರು. ಇದು ಸುದೀಪ್‍ ಅಭಿನಯದ 47ನೇ ಚಿತ್ರವಾಗಿದ್ದು, ಸದ್ಯಕ್ಕೆ ‘ಕೆ-47’ ಎಂದು ಕರೆಯಲಾಗುತ್ತಿದೆ.

ಇದು ‘ಮ್ಯಾಕ್ಸ್’ ಚಿತ್ರದ ಪ್ರೀಕ್ವೆಲ್‍ ಆಗಿದ್ದು, ಚಿತ್ರಕ್ಕೆ ‘ಮ್ಯಾಕ್ಸ್ 2’ ಎಂಬ ಹೆಸರಿಡಲಾಗಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಇದು ‘ಮ್ಯಾಕ್ಸ್ 2’ ಅಲ್ಲ ಎಂದು ಸುದೀಪ್‍ ಸ್ಪಷ್ಟಪಡಿಸಿದ್ದಾರೆ. ‘ಇದು ಬೇರೆಯದೇ ಪಾತ್ರ. ಬೇರೆಯದೇ ವ್ಯಕ್ತಿತ್ವ. ‘ಮ್ಯಾಕ್ಸ್’ನ ಅರ್ಜುನ್‍ ಮಹಾಕ್ಷಯ್ ಪಾತ್ರಕ್ಕಿಂತ ವಿಭಿನ್ನವಾದದ್ದು. ಈ ಪಾತ್ರ ಮುತ್ತತ್ತಿ ಸತ್ಯರಾಜು ಪಾತ್ರದಂತಿದೆ. ಹಾಗಾಗಿ, ‘ಮ್ಯಾಕ್ಸ್ 2’ ಚಿತ್ರವನ್ನು ಸದ್ಯಕ್ಕೆ ಕೈಬಿಟ್ಟು, ಬೇರೆಯದೇ ಹೊಸ ಚಿತ್ರ ಮಾಡುವುದಕ್ಕೆ ಹೊರಟಿದ್ದೇವೆ’ ಎಂದು ಹೇಳಿದ್ದಾರೆ.

‘ಮ್ಯಾಕ್ಸ್’ ತರಹ ಈ ಚಿತ್ರದಲ್ಲೂ ಸುದೀಪ್‍ಗೆ ನಾಯಕಿ ಇರುವುದಿಲ್ಲವಂತೆ. ಈ ಬಗ್ಗೆ ಮಾತನಾಡಿರುವ ಸುದೀಪ್‍, ‘ಚಿತ್ರದಲ್ಲಿ ಒಂದು ನಾಯಕಿ ಪಾತ್ರ ಇತ್ತು. ಆದರೆ, ಕಥೆಯ ಓಟಕ್ಕೆ ನಾಯಕಿ ಮತ್ತು ಆಕೆಯ ದೃಶ್ಯಗಳ ಅವಶ್ಯಕತೆ ಇಲ್ಲ ಎಂದನಿಸಿದ್ದರಿಂದ ಆ ಪಾತ್ರವನ್ನು ಕೈಬಿಟ್ಟಿದ್ದೇವೆ. ನಾಯಕಿ ಪಾತ್ರವನ್ನು ಸುಮ್ಮನೆ ತುರುಕಬಾರದು. ಚಿತ್ರದಲ್ಲಿ ನಾಯಕಿ ಇರಬೇಕೆಂದರೆ ಒಳ್ಳೆಯ ಪಾತ್ರ ಇರಬೇಕು. ಕೆಲವೊಮ್ಮೆ ಆ ಪಾತ್ರಕ್ಕೆ ನ್ಯಾಯ ಸಲ್ಲಿಸುವುದಕ್ಕೆ ಆಗುವುದಿಲ್ಲ. ಹಾಗಾಗಿ, ನಾಯಕಿ ಪಾತ್ರವನ್ನು ಬಿಟ್ಟಿದ್ದೇವೆ’ ಎಂದಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರವನ್ನು ತಮಿಳಿನ ಜನಪ್ರಿಯ ನಿರ್ಮಾಣ ಸಂಸ್ಥೆ ಸತ್ಯಜ್ಯೋತಿ ಫಿಲಂಸ್‍ ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ವಿಜಯ್‍ ಕಾರ್ತಿಕೇಯ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಜನೀಶ್ ಲೋಕನಾಥ್‍ ಸಂಗೀತ ಮತ್ತು ಶೇಖರ್‍ ಚಂದ್ರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago