ಮನರಂಜನೆ

ಕಿರಣ್‍ ರಾಜ್‍ ಈಗ ‘ಜಾಕಿ’: ಮೇ.15ರಿಂದ ಚಿತ್ರೀಕರಣ ಪ್ರಾರಂಭ

‘ಮೇಘ’ ಚಿತ್ರದ ಬಿಡುಗಡೆಯ ನಂತರ ಕಿರುತೆರೆಯಲ್ಲಿ ‘ಕರ್ಣ’ನಾಗಿರುವ ಕಿರಣ್‍ ರಾಜ್‍, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬರುವುದಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಅವರು ಹೊಸದೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಈ ಚಿತ್ರ ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ.

ಈ ಹಿಂದೆ ಕಿರಣ್‍ ರಾಜ್‍ ಅಭಿನಯದ ‘ಬಡ್ಡೀಸ್‍’ ಮತ್ತು ‘ರಾನಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಗುರುತೇಜ್‍ ಶೆಟ್ಟಿ, ಈಗ ಫ್ಯಾಮಿಲಿ ಸೆಂಟಿಮೆಂಟ್‍ ಒಳಗೊಂಡ ಥ್ರಿಲ್ಲರ್‍ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಚಿತ್ರಕ್ಕೆ ‘ಜಾಕಿ 42’ ಎಂಬ ಹೆಸರಿಡಲಾಗಿದ್ದು, ಮೇ.15ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

‘ರಾನಿ’ ಯಲ್ಲಿ ಲಾಂಗ್ ಹಿಡಿದಿದ್ದ ಕಿರಣ್ ರಾಜ್, ಈಗ ಕುದುರೆ ಏರಿ ಜಾಕಿಯಾಗಿದ್ದಾರೆ. ಇದೊಂದು ರೇಸ್‍ ಹಿನ್ನೆಲೆಯ ಕಥೆಯಾಗಿದ್ದು, ಎಲ್ಲಾ ಕಮರ್ಷಿಯಲ್‍ ಅಂಶಗಳೂ ಚಿತ್ರದಲ್ಲಿ ಇವೆಯಂತೆ. ಇತ್ತೀಚೆಗೆ ‘ಜಾಕಿ 42’ ಚಿತ್ರದ ಮೊದಲ ಪೋಸ್ಟರ್‍ ಬಿಡುಗಡೆಯಾಗಿದ್ದು, ರೇಸ್‍ನಲ್ಲಿ ಜಾಕಿಯೊಬ್ಬ ಕುದುರೆ ಓಡಿಸುತ್ತಿರುವ ದೃಶ್ಯವಿದ್ದು, ಕುದುರೆಯ ಕೆಳಗೆ 500 ರೂ.ಗಳ ನೋಟುಗಳ ಬಂಡಲ್‍ ಇದೆ.

ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ‌ ‘ಜಾಕಿ 42’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಬರವಣಿಗೆ ಮತ್ತು ಪ್ರೀ-ಪ್ರೊಡಕ್ಷನ್‍ ಕೆಲಸಗಳು ಭರದಿಂದ ಸಾಗಿದೆ. ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಅಲ್ಲದೆ ವಿದೇಶದಲ್ಲೂ ಚಿತ್ರೀಕರಣ ನಡೆಯಲಿದೆ.

ನಿರ್ಮಾಪಕರನ್ನು ಹೊರತುಪಡಿಸಿ, ‘ರಾನಿ’ಯಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಕೆಲಸ ಮಾಡುತ್ತಿದ್ದಾರೆ. ರಾಘವೇಂದ್ರ ಬಿ. ಕೋಲಾರ ಛಾಯಾಗ್ರಹಣ, ಸತೀಶ್ ಕಲಾ ನಿರ್ದೇಶನ ಹಾಗೂ ಉಮೇಶ ಆರ್.ಬಿ ಸಂಕಲನ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

3 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

3 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

3 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

3 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago