ಮನರಂಜನೆ

ಕಿರಣ್‍ ರಾಜ್‍ ಈಗ ‘ಜಾಕಿ’: ಮೇ.15ರಿಂದ ಚಿತ್ರೀಕರಣ ಪ್ರಾರಂಭ

‘ಮೇಘ’ ಚಿತ್ರದ ಬಿಡುಗಡೆಯ ನಂತರ ಕಿರುತೆರೆಯಲ್ಲಿ ‘ಕರ್ಣ’ನಾಗಿರುವ ಕಿರಣ್‍ ರಾಜ್‍, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬರುವುದಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಅವರು ಹೊಸದೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಈ ಚಿತ್ರ ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ.

ಈ ಹಿಂದೆ ಕಿರಣ್‍ ರಾಜ್‍ ಅಭಿನಯದ ‘ಬಡ್ಡೀಸ್‍’ ಮತ್ತು ‘ರಾನಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಗುರುತೇಜ್‍ ಶೆಟ್ಟಿ, ಈಗ ಫ್ಯಾಮಿಲಿ ಸೆಂಟಿಮೆಂಟ್‍ ಒಳಗೊಂಡ ಥ್ರಿಲ್ಲರ್‍ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಚಿತ್ರಕ್ಕೆ ‘ಜಾಕಿ 42’ ಎಂಬ ಹೆಸರಿಡಲಾಗಿದ್ದು, ಮೇ.15ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

‘ರಾನಿ’ ಯಲ್ಲಿ ಲಾಂಗ್ ಹಿಡಿದಿದ್ದ ಕಿರಣ್ ರಾಜ್, ಈಗ ಕುದುರೆ ಏರಿ ಜಾಕಿಯಾಗಿದ್ದಾರೆ. ಇದೊಂದು ರೇಸ್‍ ಹಿನ್ನೆಲೆಯ ಕಥೆಯಾಗಿದ್ದು, ಎಲ್ಲಾ ಕಮರ್ಷಿಯಲ್‍ ಅಂಶಗಳೂ ಚಿತ್ರದಲ್ಲಿ ಇವೆಯಂತೆ. ಇತ್ತೀಚೆಗೆ ‘ಜಾಕಿ 42’ ಚಿತ್ರದ ಮೊದಲ ಪೋಸ್ಟರ್‍ ಬಿಡುಗಡೆಯಾಗಿದ್ದು, ರೇಸ್‍ನಲ್ಲಿ ಜಾಕಿಯೊಬ್ಬ ಕುದುರೆ ಓಡಿಸುತ್ತಿರುವ ದೃಶ್ಯವಿದ್ದು, ಕುದುರೆಯ ಕೆಳಗೆ 500 ರೂ.ಗಳ ನೋಟುಗಳ ಬಂಡಲ್‍ ಇದೆ.

ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ‌ ‘ಜಾಕಿ 42’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಬರವಣಿಗೆ ಮತ್ತು ಪ್ರೀ-ಪ್ರೊಡಕ್ಷನ್‍ ಕೆಲಸಗಳು ಭರದಿಂದ ಸಾಗಿದೆ. ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಅಲ್ಲದೆ ವಿದೇಶದಲ್ಲೂ ಚಿತ್ರೀಕರಣ ನಡೆಯಲಿದೆ.

ನಿರ್ಮಾಪಕರನ್ನು ಹೊರತುಪಡಿಸಿ, ‘ರಾನಿ’ಯಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಕೆಲಸ ಮಾಡುತ್ತಿದ್ದಾರೆ. ರಾಘವೇಂದ್ರ ಬಿ. ಕೋಲಾರ ಛಾಯಾಗ್ರಹಣ, ಸತೀಶ್ ಕಲಾ ನಿರ್ದೇಶನ ಹಾಗೂ ಉಮೇಶ ಆರ್.ಬಿ ಸಂಕಲನ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

7 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

7 hours ago