‘ಮೇಘ’ ಚಿತ್ರದ ಬಿಡುಗಡೆಯ ನಂತರ ಕಿರುತೆರೆಯಲ್ಲಿ ‘ಕರ್ಣ’ನಾಗಿರುವ ಕಿರಣ್ ರಾಜ್, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬರುವುದಕ್ಕೆ ಸಜ್ಜಾಗುತ್ತಿದ್ದಾರೆ. ಈ ಬಾರಿ ಅವರು ಹೊಸದೊಂದು ಚಿತ್ರವನ್ನು ಒಪ್ಪಿಕೊಂಡಿದ್ದು, ಈ ಚಿತ್ರ ಮೇ ತಿಂಗಳಲ್ಲಿ ಪ್ರಾರಂಭವಾಗಲಿದೆ.
ಈ ಹಿಂದೆ ಕಿರಣ್ ರಾಜ್ ಅಭಿನಯದ ‘ಬಡ್ಡೀಸ್’ ಮತ್ತು ‘ರಾನಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಗುರುತೇಜ್ ಶೆಟ್ಟಿ, ಈಗ ಫ್ಯಾಮಿಲಿ ಸೆಂಟಿಮೆಂಟ್ ಒಳಗೊಂಡ ಥ್ರಿಲ್ಲರ್ ಚಿತ್ರವೊಂದಕ್ಕೆ ಕೈ ಹಾಕಿದ್ದಾರೆ. ಚಿತ್ರಕ್ಕೆ ‘ಜಾಕಿ 42’ ಎಂಬ ಹೆಸರಿಡಲಾಗಿದ್ದು, ಮೇ.15ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.
‘ರಾನಿ’ ಯಲ್ಲಿ ಲಾಂಗ್ ಹಿಡಿದಿದ್ದ ಕಿರಣ್ ರಾಜ್, ಈಗ ಕುದುರೆ ಏರಿ ಜಾಕಿಯಾಗಿದ್ದಾರೆ. ಇದೊಂದು ರೇಸ್ ಹಿನ್ನೆಲೆಯ ಕಥೆಯಾಗಿದ್ದು, ಎಲ್ಲಾ ಕಮರ್ಷಿಯಲ್ ಅಂಶಗಳೂ ಚಿತ್ರದಲ್ಲಿ ಇವೆಯಂತೆ. ಇತ್ತೀಚೆಗೆ ‘ಜಾಕಿ 42’ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದ್ದು, ರೇಸ್ನಲ್ಲಿ ಜಾಕಿಯೊಬ್ಬ ಕುದುರೆ ಓಡಿಸುತ್ತಿರುವ ದೃಶ್ಯವಿದ್ದು, ಕುದುರೆಯ ಕೆಳಗೆ 500 ರೂ.ಗಳ ನೋಟುಗಳ ಬಂಡಲ್ ಇದೆ.
ಗೋಲ್ಡನ್ ಗೇಟ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ‘ಜಾಕಿ 42’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದ ಬರವಣಿಗೆ ಮತ್ತು ಪ್ರೀ-ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದೆ. ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಅಲ್ಲದೆ ವಿದೇಶದಲ್ಲೂ ಚಿತ್ರೀಕರಣ ನಡೆಯಲಿದೆ.
ನಿರ್ಮಾಪಕರನ್ನು ಹೊರತುಪಡಿಸಿ, ‘ರಾನಿ’ಯಲ್ಲಿ ಕೆಲಸ ಮಾಡಿದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಕೆಲಸ ಮಾಡುತ್ತಿದ್ದಾರೆ. ರಾಘವೇಂದ್ರ ಬಿ. ಕೋಲಾರ ಛಾಯಾಗ್ರಹಣ, ಸತೀಶ್ ಕಲಾ ನಿರ್ದೇಶನ ಹಾಗೂ ಉಮೇಶ ಆರ್.ಬಿ ಸಂಕಲನ ಈ ಚಿತ್ರಕ್ಕಿದೆ.
ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…