Kireeti and Sreeleela starrer Junior Movie
ಗಾಲಿ ಜನಾರ್ಧನ ರೆಡ್ಡಿ ಮಗ ‘ಕಿರೀಟಿ’ ಚಿತ್ರರಂಗದಲ್ಲಿ ಛಾಪು ಮೂಡಿಸಲು ಸಜ್ಜಾಗಿದ್ದು, ಮೊದಲ ಚಿತ್ರ ‘ಜೂನಿಯರ್’, ಜುಲೈ 18ರಂದು ಬಿಡುಗಡೆಯಾಗಲಿದೆ. ಈಗ ಚಿತ್ರದ ಎರಡನೇ ಹಾಡು ಆದಿತ್ಯ ಮ್ಯೂಸಿಕ್ ಕನ್ನಡದಲ್ಲಿ ಬಿಡುಗಡೆಯಾಗಿದೆ.
‘ವೈರಲ್ ವಯ್ಯಾರಿ …’ ಎಂದು ಸಾಗುವ ಹಾಡಿಗೆ ಪವನ್ ಭಟ್ ಸಾಹಿತ್ಯ ಬರೆದಿದ್ದು, ಹರಿಪ್ರಿಯಾ ಮತ್ತು ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ದೇವಿಶ್ರೀ ಪ್ರಸಾದ್ ಸಂಗೀತಕ್ಕೆ ಕಿರೀಟಿ ಮತ್ತು ಶ್ರೀಲೀಲಾ ಹೆಜ್ಜೆ ಹಾಕಿದ್ದಾರೆ.
ಮೂರು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ, ಕಿರೀಟಿ ಅಭಿನಯದ ‘ಜ್ಯೂನಿಯರ್’ ತಂದೆ-ಮಗನ ಬಾಂಧವ್ಯ ಕುರಿತಾದ ಚಿತ್ರ. ಇಲ್ಲಿ ರವಿಚಂದ್ರನ್ ಮತ್ತು ಕಿರೀಟಿ ತಂದೆ-ಮಗನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, ರವಿಚಂದ್ರನ್ ಅವರ ಮಗಳಾಗಿ ಜೆನಿಲಿಯಾ ಅಭಿನಯಿಸಿದ್ದಾರಂತೆ.
‘ಜೂನಿಯರ್’ ಚಿತ್ರದಲ್ಲಿ ಕಿರೀಟಿ ಜೊತೆಗೆ ರವಿಚಂದ್ರನ್, ಜೆನಿಲಿಯಾ ಡಿಸೋಜಾ, ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪುನೀತ್ ರಾಜ್ಕುಮಾರ್ ನಿರ್ಮಿಸಿದ್ದ ‘ಮಾಯಾಬಜಾರ್’ ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, ‘ಬಾಹುಬಲಿ’ ಮತ್ತು ‘RRR’ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದ ಸೆಂಥಿಲ್ ಕುಮಾರ್ ಈ ಚಿತ್ರದ ಛಾಯಾಗ್ರಾಹ ಮಾಡಿದ್ದಾರೆ.
ಈ ಚಿತ್ರದ ಕುರಿತು ಮಾತನಾಡಿರುವ ರಾಧಾಕೃಷ್ಣ ರೆಡ್ಡಿ, ‘ದೊಡ್ಡ ದೊಡ್ಡ ಕಲಾವಿದರು ಮತ್ತು ತಂತ್ರಜ್ಞರ ಜೊತೆಗೆ ಈ ಚಿತ್ರದಲ್ಲಿ ಕೆಲಸ ಮಾಡಿರುವುದು ‘ಜೂನಿಯರ್’ ಸೇಫ್ ಎಂದರ್ಥ. ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್ ಜೊತೆಗೆ ಕೆಲಸ ಮಾಡಿರುವುದು ನೆನಪಿನಲ್ಲಿ ಉಳಿಯುವಂತಹದ್ದು. ಚಿತ್ರದ ಪ್ರತಿ ಫ್ರೇಮ್ ಕೂಡ ಸ್ಪೆಷಲ್ ಅಗಿದೆ’ ಎಂದು ಹೇಳಿಕೊಂಡಿದ್ದಾರೆ.
‘ಜೂನಿಯರ್’ ಚಿತ್ರವು ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…
ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…
ಬೆಳಗಾವಿ : ಡಿನ್ನರ್ ಬ್ರೇಕ್ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…