ಮನರಂಜನೆ

Kireeti Junior; ವೈರಲ್‌ ವಯ್ಯಾರಿ …’ಗೆ ಕಿರೀಟಿ-ಶ್ರೀಲೀಲಾ ಭರ್ಜರಿ ಡ್ಯಾನ್ಸ್ …

ಗಾಲಿ ಜನಾರ್ಧನ ರೆಡ್ಡಿ ಮಗ ‘ಕಿರೀಟಿ’ ಚಿತ್ರರಂಗದಲ್ಲಿ ಛಾಪು ಮೂಡಿಸಲು ಸಜ್ಜಾಗಿದ್ದು, ಮೊದಲ ಚಿತ್ರ ‘ಜೂನಿಯರ್‌’, ಜುಲೈ 18ರಂದು ಬಿಡುಗಡೆಯಾಗಲಿದೆ. ಈಗ ಚಿತ್ರದ ಎರಡನೇ ಹಾಡು ಆದಿತ್ಯ ಮ್ಯೂಸಿಕ್‌ ಕನ್ನಡದಲ್ಲಿ ಬಿಡುಗಡೆಯಾಗಿದೆ.

‘ವೈರಲ್‌ ವಯ್ಯಾರಿ …’ ಎಂದು ಸಾಗುವ ಹಾಡಿಗೆ ಪವನ್‌ ಭಟ್‌ ಸಾಹಿತ್ಯ ಬರೆದಿದ್ದು, ಹರಿಪ್ರಿಯಾ ಮತ್ತು ದೀಪಕ್‌ ಬ್ಲೂ ಧ್ವನಿಯಾಗಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತಕ್ಕೆ ಕಿರೀಟಿ ಮತ್ತು ಶ್ರೀಲೀಲಾ ಹೆಜ್ಜೆ ಹಾಕಿದ್ದಾರೆ.

ಮೂರು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ, ಕಿರೀಟಿ ಅಭಿನಯದ ‘ಜ್ಯೂನಿಯರ್‍’ ತಂದೆ-ಮಗನ ಬಾಂಧವ್ಯ ಕುರಿತಾದ ಚಿತ್ರ. ಇಲ್ಲಿ ರವಿಚಂದ್ರನ್‍ ಮತ್ತು ಕಿರೀಟಿ ತಂದೆ-ಮಗನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, ರವಿಚಂದ್ರನ್‍ ಅವರ ಮಗಳಾಗಿ ಜೆನಿಲಿಯಾ ಅಭಿನಯಿಸಿದ್ದಾರಂತೆ.

‘ಜೂನಿಯರ್‌’ ಚಿತ್ರದಲ್ಲಿ ಕಿರೀಟಿ ಜೊತೆಗೆ ರವಿಚಂದ್ರನ್, ಜೆನಿಲಿಯಾ ಡಿಸೋಜಾ, ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ನಿರ್ಮಿಸಿದ್ದ ‘ಮಾಯಾಬಜಾರ್’ ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, ‘ಬಾಹುಬಲಿ’ ಮತ್ತು ‘RRR’ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದ ಸೆಂಥಿಲ್‍ ಕುಮಾರ್‍ ಈ ಚಿತ್ರದ ಛಾಯಾಗ್ರಾಹ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿರುವ ರಾಧಾಕೃಷ್ಣ ರೆಡ್ಡಿ, ‘ದೊಡ್ಡ ದೊಡ್ಡ ಕಲಾವಿದರು ಮತ್ತು ತಂ‍ತ್ರಜ್ಞರ ಜೊತೆಗೆ ಈ ಚಿತ್ರದಲ್ಲಿ ಕೆಲಸ ಮಾಡಿರುವುದು ‘ಜೂನಿಯರ್’ ಸೇಫ್ ಎಂದರ್ಥ. ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್‍ ಜೊತೆಗೆ ಕೆಲಸ ಮಾಡಿರುವುದು ನೆನಪಿನಲ್ಲಿ ಉಳಿಯುವಂತಹದ್ದು. ಚಿತ್ರದ ಪ್ರತಿ ಫ್ರೇಮ್ ಕೂಡ ಸ್ಪೆಷಲ್ ಅಗಿದೆ‌’ ಎಂದು ಹೇಳಿಕೊಂಡಿದ್ದಾರೆ.

‘ಜೂನಿಯರ್‌’ ಚಿತ್ರವು ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

9 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

9 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

10 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

10 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

15 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

16 hours ago