ಮನರಂಜನೆ

Kireeti Junior; ವೈರಲ್‌ ವಯ್ಯಾರಿ …’ಗೆ ಕಿರೀಟಿ-ಶ್ರೀಲೀಲಾ ಭರ್ಜರಿ ಡ್ಯಾನ್ಸ್ …

ಗಾಲಿ ಜನಾರ್ಧನ ರೆಡ್ಡಿ ಮಗ ‘ಕಿರೀಟಿ’ ಚಿತ್ರರಂಗದಲ್ಲಿ ಛಾಪು ಮೂಡಿಸಲು ಸಜ್ಜಾಗಿದ್ದು, ಮೊದಲ ಚಿತ್ರ ‘ಜೂನಿಯರ್‌’, ಜುಲೈ 18ರಂದು ಬಿಡುಗಡೆಯಾಗಲಿದೆ. ಈಗ ಚಿತ್ರದ ಎರಡನೇ ಹಾಡು ಆದಿತ್ಯ ಮ್ಯೂಸಿಕ್‌ ಕನ್ನಡದಲ್ಲಿ ಬಿಡುಗಡೆಯಾಗಿದೆ.

‘ವೈರಲ್‌ ವಯ್ಯಾರಿ …’ ಎಂದು ಸಾಗುವ ಹಾಡಿಗೆ ಪವನ್‌ ಭಟ್‌ ಸಾಹಿತ್ಯ ಬರೆದಿದ್ದು, ಹರಿಪ್ರಿಯಾ ಮತ್ತು ದೀಪಕ್‌ ಬ್ಲೂ ಧ್ವನಿಯಾಗಿದ್ದಾರೆ. ದೇವಿಶ್ರೀ ಪ್ರಸಾದ್‌ ಸಂಗೀತಕ್ಕೆ ಕಿರೀಟಿ ಮತ್ತು ಶ್ರೀಲೀಲಾ ಹೆಜ್ಜೆ ಹಾಕಿದ್ದಾರೆ.

ಮೂರು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ, ಕಿರೀಟಿ ಅಭಿನಯದ ‘ಜ್ಯೂನಿಯರ್‍’ ತಂದೆ-ಮಗನ ಬಾಂಧವ್ಯ ಕುರಿತಾದ ಚಿತ್ರ. ಇಲ್ಲಿ ರವಿಚಂದ್ರನ್‍ ಮತ್ತು ಕಿರೀಟಿ ತಂದೆ-ಮಗನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, ರವಿಚಂದ್ರನ್‍ ಅವರ ಮಗಳಾಗಿ ಜೆನಿಲಿಯಾ ಅಭಿನಯಿಸಿದ್ದಾರಂತೆ.

‘ಜೂನಿಯರ್‌’ ಚಿತ್ರದಲ್ಲಿ ಕಿರೀಟಿ ಜೊತೆಗೆ ರವಿಚಂದ್ರನ್, ಜೆನಿಲಿಯಾ ಡಿಸೋಜಾ, ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪುನೀತ್ ರಾಜ್‌ಕುಮಾರ್ ನಿರ್ಮಿಸಿದ್ದ ‘ಮಾಯಾಬಜಾರ್’ ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಈ ಚಿತ್ರವನ್ನು ನಿರ್ದೇಶಿಸಿದ್ದು, ‘ಬಾಹುಬಲಿ’ ಮತ್ತು ‘RRR’ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದ ಸೆಂಥಿಲ್‍ ಕುಮಾರ್‍ ಈ ಚಿತ್ರದ ಛಾಯಾಗ್ರಾಹ ಮಾಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿರುವ ರಾಧಾಕೃಷ್ಣ ರೆಡ್ಡಿ, ‘ದೊಡ್ಡ ದೊಡ್ಡ ಕಲಾವಿದರು ಮತ್ತು ತಂ‍ತ್ರಜ್ಞರ ಜೊತೆಗೆ ಈ ಚಿತ್ರದಲ್ಲಿ ಕೆಲಸ ಮಾಡಿರುವುದು ‘ಜೂನಿಯರ್’ ಸೇಫ್ ಎಂದರ್ಥ. ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್‍ ಜೊತೆಗೆ ಕೆಲಸ ಮಾಡಿರುವುದು ನೆನಪಿನಲ್ಲಿ ಉಳಿಯುವಂತಹದ್ದು. ಚಿತ್ರದ ಪ್ರತಿ ಫ್ರೇಮ್ ಕೂಡ ಸ್ಪೆಷಲ್ ಅಗಿದೆ‌’ ಎಂದು ಹೇಳಿಕೊಂಡಿದ್ದಾರೆ.

‘ಜೂನಿಯರ್‌’ ಚಿತ್ರವು ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

36 seconds ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

1 min ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

2 mins ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 mins ago

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

1 hour ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago