ಮನರಂಜನೆ

‘ಅನಾಮಧೇಯ ಅಶೋಕ್ ಕುಮಾರ್ ಆದ ಕಿಶೋರ್

 

ಒಂದಿಷ್ಟು ಸಮಯ ಪರಭಾಷೆಯ ಚಿತ್ರಗಳಲ್ಲಿ ಬ್ಯುಸಿಯಾಗಿದ್ದ ಕಿಶೋರ್‍, ಇದೀಗ ಕನ್ನಡದ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ‘ಅನಾಮಧೇಯ ಅಶೋಕ್ ಕುಮಾರ್‌’ ಎಂಬ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ.

ಈ ಹಿಂದೆ ‘ಆಚಾರ್ & ಕೋ’ ಚಿತ್ರದ ಮೂಲಕ ಗಮನಸೆಳೆದಿದ್ದ ಹರ್ಷಿಲ್ ಕೌಶಿಕ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಅನಾಮಧೇಯ ಅಶೋಕ್ ಕುಮಾರ್‌’ ಚಿತ್ರದಲ್ಲಿ ಕಿಶೋರ್‍ ಸಹ ಒಂದು ಮಹತ್ವದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಗಿದಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

‘ಅನಾಮಧೇಯ ಅಶೋಕ್ ಕುಉಮಾರ್‍’ ಒಂದು ಥ್ರಿಲ್ಲರ್‍ ಚಿತ್ರವಾಗಿದ್ದು, ಒಬ್ಬ ಪತ್ರಕರ್ತ ಮತ್ತು ಪೊಲೀಸ್ ಅಧಿಕಾರಿಯ ಸುತ್ತ ಸುತ್ತುವ ಚಿತ್ರವಾಗಿದೆ. ಪತ್ರಕರ್ತನ ಪಾತ್ರದಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಹರ್ಷಿಲ್ ಕೌಶಿಕ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಸಾಗರ್ ಕುಮಾರ್ ಅವರೇ ಕಥೆ ಬರೆದಿದ್ದಾರೆ. ಚಿತ್ರಕಥೆಯನ್ನು ಬೆನ್ನಿ ಥಾಮಸ್ ಹಾಗೂ ಸಾಗರ್ ಕುಮಾರ್ ಬರೆದಿದ್ದಾರೆ. ಮೂಲತಃ ಐಟಿ ಉದ್ಯೋಗಿಯಾಗಿರುವ ಸಾಗರ್ ಕುಮಾರ್ ಅವರಿಗೆ‌ ಇದು ಮೊದಲ ನಿರ್ದೇಶನದ ಚಿತ್ರ..

ಎಸ್‌.ಕೆ.ಎನ್ ಫಿಲಂಸ್ ಲಾಂಛನದಲ್ಲಿ ನಿರ್ಮಲಾ ಕುಮಾರ್ ಹಾಗು ರಮ್ಯ ಸಾಗರ್ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಅಜಾದ್ ಸಂಗೀತ ಸಂಯೋಜಿಸಿದ್ದಾರೆ. ಸುನೀಲ್ ಹೊನ್ನಳ್ಳಿ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಕಾಂತರಾಜ್ ‘ಕಡ್ಡಿಪುಡಿ’, ಸುಧೀಂದ್ರನ್ ನಾಯರ್ ಮುಂತಾದವರು ನಟಿಸಿದ್ದಾರೆ.

andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

9 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

9 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

10 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

10 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

10 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

10 hours ago