ಮನರಂಜನೆ

‘ಅನಾಮಧೇಯ ಅಶೋಕ್ ಕುಮಾರ್ ಆದ ಕಿಶೋರ್

 

ಒಂದಿಷ್ಟು ಸಮಯ ಪರಭಾಷೆಯ ಚಿತ್ರಗಳಲ್ಲಿ ಬ್ಯುಸಿಯಾಗಿದ್ದ ಕಿಶೋರ್‍, ಇದೀಗ ಕನ್ನಡದ ಒಂದಿಷ್ಟು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ‘ಅನಾಮಧೇಯ ಅಶೋಕ್ ಕುಮಾರ್‌’ ಎಂಬ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದೆ.

ಈ ಹಿಂದೆ ‘ಆಚಾರ್ & ಕೋ’ ಚಿತ್ರದ ಮೂಲಕ ಗಮನಸೆಳೆದಿದ್ದ ಹರ್ಷಿಲ್ ಕೌಶಿಕ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಅನಾಮಧೇಯ ಅಶೋಕ್ ಕುಮಾರ್‌’ ಚಿತ್ರದಲ್ಲಿ ಕಿಶೋರ್‍ ಸಹ ಒಂದು ಮಹತ್ವದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಗಿದಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.

‘ಅನಾಮಧೇಯ ಅಶೋಕ್ ಕುಉಮಾರ್‍’ ಒಂದು ಥ್ರಿಲ್ಲರ್‍ ಚಿತ್ರವಾಗಿದ್ದು, ಒಬ್ಬ ಪತ್ರಕರ್ತ ಮತ್ತು ಪೊಲೀಸ್ ಅಧಿಕಾರಿಯ ಸುತ್ತ ಸುತ್ತುವ ಚಿತ್ರವಾಗಿದೆ. ಪತ್ರಕರ್ತನ ಪಾತ್ರದಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಹರ್ಷಿಲ್ ಕೌಶಿಕ್ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕ ಸಾಗರ್ ಕುಮಾರ್ ಅವರೇ ಕಥೆ ಬರೆದಿದ್ದಾರೆ. ಚಿತ್ರಕಥೆಯನ್ನು ಬೆನ್ನಿ ಥಾಮಸ್ ಹಾಗೂ ಸಾಗರ್ ಕುಮಾರ್ ಬರೆದಿದ್ದಾರೆ. ಮೂಲತಃ ಐಟಿ ಉದ್ಯೋಗಿಯಾಗಿರುವ ಸಾಗರ್ ಕುಮಾರ್ ಅವರಿಗೆ‌ ಇದು ಮೊದಲ ನಿರ್ದೇಶನದ ಚಿತ್ರ..

ಎಸ್‌.ಕೆ.ಎನ್ ಫಿಲಂಸ್ ಲಾಂಛನದಲ್ಲಿ ನಿರ್ಮಲಾ ಕುಮಾರ್ ಹಾಗು ರಮ್ಯ ಸಾಗರ್ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಅಜಾದ್ ಸಂಗೀತ ಸಂಯೋಜಿಸಿದ್ದಾರೆ. ಸುನೀಲ್ ಹೊನ್ನಳ್ಳಿ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಕಾಂತರಾಜ್ ‘ಕಡ್ಡಿಪುಡಿ’, ಸುಧೀಂದ್ರನ್ ನಾಯರ್ ಮುಂತಾದವರು ನಟಿಸಿದ್ದಾರೆ.

andolana

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago