ಮಡಿಕೇರಿ: ತಮ್ಮ ನಟನೆಯಿಂದಲೇ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆಗೆ ಕೊಡವ ಸಮುದಾಯದಿಂದ ಪತ್ರ ಬರೆಯಲಾಗಿದೆ.
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ನಮ್ಮ ಕೊಡಗು ಮೂಲದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ರಶ್ಮಿಕಾ ಅವರು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಅವರ ಯಶಸ್ಸನ್ನು ಸಹಿಸದ ಕೆಲವರು ವಿನಾಕಾರಣ ಅವರನ್ನು ಟೀಕೆ ಮಾಡುವ ಮೂಲಕ ಮಾನಸಿಕ ಚಿತ್ರಹಿಂಸೆ ಕೊಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಆಯ್ಕೆಯ ಸ್ವಾತಂತ್ರ್ಯವನ್ನು ಎಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿದ್ದಾರೆ ಎಂಬ ಕಾರಣದಿಂದಲೇ ಹೀಗೆಲ್ಲಾ ಟೀಕೆ ಮಾಡುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…