ಮಡಿಕೇರಿ: ತಮ್ಮ ನಟನೆಯಿಂದಲೇ ಭಾರತೀಯ ಚಿತ್ರರಂಗದಲ್ಲಿ ಹೆಸರು ಮಾಡಿರುವ ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡುವಂತೆ ಕೇಂದ್ರ ಹಾಗೂ ರಾಜ್ಯ ಗೃಹ ಇಲಾಖೆಗೆ ಕೊಡವ ಸಮುದಾಯದಿಂದ ಪತ್ರ ಬರೆಯಲಾಗಿದೆ.
ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ನಮ್ಮ ಕೊಡಗು ಮೂಲದ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಭದ್ರತೆ ನೀಡಿ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ತಮ್ಮ ಕಠಿಣ ಪರಿಶ್ರಮ ಮತ್ತು ಪ್ರತಿಭೆ ಮೂಲಕ ರಶ್ಮಿಕಾ ಅವರು ಭಾರತೀಯ ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಅವರ ಯಶಸ್ಸನ್ನು ಸಹಿಸದ ಕೆಲವರು ವಿನಾಕಾರಣ ಅವರನ್ನು ಟೀಕೆ ಮಾಡುವ ಮೂಲಕ ಮಾನಸಿಕ ಚಿತ್ರಹಿಂಸೆ ಕೊಡುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ರಶ್ಮಿಕಾ ಮಂದಣ್ಣ ಅವರ ಆಯ್ಕೆಯ ಸ್ವಾತಂತ್ರ್ಯವನ್ನು ಎಲ್ಲರೂ ಗೌರವಿಸಬೇಕು. ಅದನ್ನು ಬಿಟ್ಟು ಯಾರೋ ಒಬ್ಬರ ಸೂಚನೆಯಂತೆ ಇರಬೇಕು ಎಂದು ಒತ್ತಡ ಹೇರಬಾರದು. ರಶ್ಮಿಕಾ ಅವರು ಕೊಡವ ಸಮಾಜಕ್ಕೆ ಸೇರಿದ್ದಾರೆ ಎಂಬ ಕಾರಣದಿಂದಲೇ ಹೀಗೆಲ್ಲಾ ಟೀಕೆ ಮಾಡುತ್ತಿದ್ದಾರೆ ಎಂಬ ಅರ್ಥ ಬರುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…