vishal and dhanshika marriage
ಕಾಲಿವುಡ್ ನಟ ವಿಶಾಲ್ಗೆ 47 ವಯಸ್ಸಾದರೂ ಮದುವೆಯಾಗಿಲ್ಲ. ಮದುವೆ ಯಾವಾಗ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗಲೆಲ್ಲಾ ನಡಿಗರ್ ಸಂಗಂ ಕಟ್ಟಡದ ಉದ್ಘಾಟನೆಯಾದ ನಂತರ ಮದುವೆ ಎಂದು ಹೇಳುತ್ತಿದ್ದರು. ಅದರಂತೆ ಸಂಘದ ಉದ್ಘಾಟನೆ ಆಗಸ್ಟ್ 15ರಂದು ನಡೆಯಲಿದೆ. ಅದಾಗಿ ಕೆಲವೇ ದಿನಗಳಲ್ಲಿ ಅಂದರೆ, ಆ.29ರಂದು ಅವರು ಮದುವೆಯಾಗಲಿದ್ದಾರೆ.
ವಿಶಾಲ್ ಮದುವೆಯಾಗುತ್ತಿರುವ ಹುಡುಗಿ ಯಾರು ಗೊತ್ತಾ? ನಟಿ ಸಾಯಿ ಧನ್ಶಿಕಾ. ಕನ್ನಡದ ‘ಕೆಂಪ’ ಮತ್ತು ‘ಉದ್ಘರ್ಷ’ ಚಿತ್ರದಲ್ಲಿ ನಟಿಸಿರುವ ಧನ್ಶಿಕಾ ಮತ್ತು ವಿಶಾಲ್ ಸುಮಾರು 15 ವರ್ಷಗಳ ಸ್ನೇಹಿತರಂತೆ. ಈಗ ಇಬ್ಬರೂ ಜೊತೆಯಾಗಿ ಹಸೆಮಣೆ ಏರಲಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ಹೊಸ ಚಿತ್ರದ ಸಮಾರಂಭದಲ್ಲಿ ಇಬ್ಬರೂ ವಿಷಯವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಸಮಾರಂಭಕ್ಕೆ ಅತಿಥಿಯಾಗಿ ಬಂದಿದ್ದ ವಿಶಾಲ್ ಮಾತನಾಡಿ, ‘ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ’ ಎಂದು ಹೇಳಿದ್ದಾರೆ.
ಮದುವೆ ವಿಷಯ ಈಗಲೇ ತಿಳಿಸಬಾರದು ಅಂತ ಅಂದುಕೊಂಡಿದ್ದರಂತೆ ಧನ್ಶಿಕಾ. ‘ಸೋಶಿಯಲ್ ಮೀಡಿಯಾದಲ್ಲಿ ಬೆಳಗ್ಗೆಯಿಂದ ನ್ಯೂಸ್ ವೈರಲ್ ಆಗುತ್ತಿದೆ. ಇನ್ನು ಮುಚ್ಚಿಟ್ಟು ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಈಗಲೇ ಮದುವೆ ದಿನಾಂಕ ಘೋಷಣೆ ಮಾಡುತ್ತಿದ್ದೇವೆ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ಅವರಿಗೆ ನನ್ನ ಬಗ್ಗೆ ತುಂಬಾ ಗೌರವ ಇದೆ. ನಾನು ಸಮಸ್ಯೆಯಲ್ಲಿದ್ದಾಗ, ಅವರು ನನ್ನ ಮನೆಗೆ ಬಂದು ಬೆಂಬಲವಾಗಿ ನಿಂತಿದ್ದರು. ಯಾವ ಹೀರೋ ಸಹ ನನಗೆ ಬೆಂಬಲವನ್ನು ಸೂಚಿಸಿರಲಿಲ್ಲ. ಅವರ ಈ ನಡವಳಿಕೆಯಿಂದ ಬಹಳ ಖುಷಿಯಾಯಿತು. ನಡಿಗರ್ ಸಂಘದ ಕಟ್ಟಡ ಆಗಸ್ಟ್.15ರಂದು ಉದ್ಘಾಟನೆ ಆಗಲಿದೆ. ಬಳಿಕ ಆಗಸ್ಟ್.29ರಂದು ಇಬ್ಬರು ಹೊಸ ಜೀವನಕ್ಕೆ ಕಾಲಿಡಲಿದ್ದೇವೆ’ ಎಂದು ಹೇಳಿದ್ದಾರೆ.
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಅಜಿತ್…
ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…