ಮನರಂಜನೆ

ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆಗೆ ವಿಶಾಲ್‍ ಮದುವೆ

ಕಾಲಿವುಡ್‍ ನಟ ವಿಶಾಲ್‍ಗೆ 47 ವಯಸ್ಸಾದರೂ ಮದುವೆಯಾಗಿಲ್ಲ. ಮದುವೆ ಯಾವಾಗ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗಲೆಲ್ಲಾ ನಡಿಗರ್ ಸಂಗಂ ಕಟ್ಟಡದ ಉದ್ಘಾಟನೆಯಾದ ನಂತರ ಮದುವೆ ಎಂದು ಹೇಳುತ್ತಿದ್ದರು. ಅದರಂತೆ ಸಂಘದ ಉದ್ಘಾಟನೆ ಆಗಸ್ಟ್ 15ರಂದು ನಡೆಯಲಿದೆ. ಅದಾಗಿ ಕೆಲವೇ ದಿನಗಳಲ್ಲಿ ಅಂದರೆ, ಆ.29ರಂದು ಅವರು ಮದುವೆಯಾಗಲಿದ್ದಾರೆ.

ವಿಶಾಲ್‍ ಮದುವೆಯಾಗುತ್ತಿರುವ ಹುಡುಗಿ ಯಾರು ಗೊತ್ತಾ? ನಟಿ ಸಾಯಿ ಧನ್ಶಿಕಾ. ಕನ್ನಡದ ‘ಕೆಂಪ’ ಮತ್ತು ‘ಉದ್ಘರ್ಷ’ ಚಿತ್ರದಲ್ಲಿ ನಟಿಸಿರುವ ಧನ್ಶಿಕಾ ಮತ್ತು ವಿಶಾಲ್‍ ಸುಮಾರು 15 ವರ್ಷಗಳ ಸ್ನೇಹಿತರಂತೆ. ಈಗ ಇಬ್ಬರೂ ಜೊತೆಯಾಗಿ ಹಸೆಮಣೆ ಏರಲಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ಹೊಸ ಚಿತ್ರದ ಸಮಾರಂಭದಲ್ಲಿ ಇಬ್ಬರೂ ವಿಷಯವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಈ ಸಮಾರಂಭಕ್ಕೆ ಅತಿಥಿಯಾಗಿ ಬಂದಿದ್ದ ವಿಶಾಲ್‍ ಮಾತನಾಡಿ, ‘ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ’ ಎಂದು ಹೇಳಿದ್ದಾರೆ.

ಮದುವೆ ವಿಷಯ ಈಗಲೇ ತಿಳಿಸಬಾರದು ಅಂತ ಅಂದುಕೊಂಡಿದ್ದರಂತೆ ಧನ್ಶಿಕಾ. ‘ಸೋಶಿಯಲ್ ಮೀಡಿಯಾದಲ್ಲಿ ಬೆಳಗ್ಗೆಯಿಂದ ನ್ಯೂಸ್ ವೈರಲ್ ಆಗುತ್ತಿದೆ. ಇನ್ನು ಮುಚ್ಚಿಟ್ಟು ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಈಗಲೇ ಮದುವೆ ದಿನಾಂಕ ಘೋಷಣೆ ಮಾಡುತ್ತಿದ್ದೇವೆ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ಅವರಿಗೆ ನನ್ನ ಬಗ್ಗೆ ತುಂಬಾ ಗೌರವ ಇದೆ. ನಾನು ಸಮಸ್ಯೆಯಲ್ಲಿದ್ದಾಗ, ಅವರು ನನ್ನ ಮನೆಗೆ ಬಂದು ಬೆಂಬಲವಾಗಿ ನಿಂತಿದ್ದರು. ಯಾವ ಹೀರೋ ಸಹ ನನಗೆ ಬೆಂಬಲವನ್ನು ಸೂಚಿಸಿರಲಿಲ್ಲ. ಅವರ ಈ ನಡವಳಿಕೆಯಿಂದ ಬಹಳ ಖುಷಿಯಾಯಿತು. ನಡಿಗರ್ ಸಂಘದ ಕಟ್ಟಡ ಆಗಸ್ಟ್.15ರಂದು ಉದ್ಘಾಟನೆ ಆಗಲಿದೆ. ಬಳಿಕ ಆಗಸ್ಟ್.29ರಂದು ಇಬ್ಬರು ಹೊಸ ಜೀವನಕ್ಕೆ ಕಾಲಿಡಲಿದ್ದೇವೆ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

6 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

13 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

13 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago