vishal and dhanshika marriage
ಕಾಲಿವುಡ್ ನಟ ವಿಶಾಲ್ಗೆ 47 ವಯಸ್ಸಾದರೂ ಮದುವೆಯಾಗಿಲ್ಲ. ಮದುವೆ ಯಾವಾಗ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗಲೆಲ್ಲಾ ನಡಿಗರ್ ಸಂಗಂ ಕಟ್ಟಡದ ಉದ್ಘಾಟನೆಯಾದ ನಂತರ ಮದುವೆ ಎಂದು ಹೇಳುತ್ತಿದ್ದರು. ಅದರಂತೆ ಸಂಘದ ಉದ್ಘಾಟನೆ ಆಗಸ್ಟ್ 15ರಂದು ನಡೆಯಲಿದೆ. ಅದಾಗಿ ಕೆಲವೇ ದಿನಗಳಲ್ಲಿ ಅಂದರೆ, ಆ.29ರಂದು ಅವರು ಮದುವೆಯಾಗಲಿದ್ದಾರೆ.
ವಿಶಾಲ್ ಮದುವೆಯಾಗುತ್ತಿರುವ ಹುಡುಗಿ ಯಾರು ಗೊತ್ತಾ? ನಟಿ ಸಾಯಿ ಧನ್ಶಿಕಾ. ಕನ್ನಡದ ‘ಕೆಂಪ’ ಮತ್ತು ‘ಉದ್ಘರ್ಷ’ ಚಿತ್ರದಲ್ಲಿ ನಟಿಸಿರುವ ಧನ್ಶಿಕಾ ಮತ್ತು ವಿಶಾಲ್ ಸುಮಾರು 15 ವರ್ಷಗಳ ಸ್ನೇಹಿತರಂತೆ. ಈಗ ಇಬ್ಬರೂ ಜೊತೆಯಾಗಿ ಹಸೆಮಣೆ ಏರಲಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ಹೊಸ ಚಿತ್ರದ ಸಮಾರಂಭದಲ್ಲಿ ಇಬ್ಬರೂ ವಿಷಯವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಸಮಾರಂಭಕ್ಕೆ ಅತಿಥಿಯಾಗಿ ಬಂದಿದ್ದ ವಿಶಾಲ್ ಮಾತನಾಡಿ, ‘ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ’ ಎಂದು ಹೇಳಿದ್ದಾರೆ.
ಮದುವೆ ವಿಷಯ ಈಗಲೇ ತಿಳಿಸಬಾರದು ಅಂತ ಅಂದುಕೊಂಡಿದ್ದರಂತೆ ಧನ್ಶಿಕಾ. ‘ಸೋಶಿಯಲ್ ಮೀಡಿಯಾದಲ್ಲಿ ಬೆಳಗ್ಗೆಯಿಂದ ನ್ಯೂಸ್ ವೈರಲ್ ಆಗುತ್ತಿದೆ. ಇನ್ನು ಮುಚ್ಚಿಟ್ಟು ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಈಗಲೇ ಮದುವೆ ದಿನಾಂಕ ಘೋಷಣೆ ಮಾಡುತ್ತಿದ್ದೇವೆ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ಅವರಿಗೆ ನನ್ನ ಬಗ್ಗೆ ತುಂಬಾ ಗೌರವ ಇದೆ. ನಾನು ಸಮಸ್ಯೆಯಲ್ಲಿದ್ದಾಗ, ಅವರು ನನ್ನ ಮನೆಗೆ ಬಂದು ಬೆಂಬಲವಾಗಿ ನಿಂತಿದ್ದರು. ಯಾವ ಹೀರೋ ಸಹ ನನಗೆ ಬೆಂಬಲವನ್ನು ಸೂಚಿಸಿರಲಿಲ್ಲ. ಅವರ ಈ ನಡವಳಿಕೆಯಿಂದ ಬಹಳ ಖುಷಿಯಾಯಿತು. ನಡಿಗರ್ ಸಂಘದ ಕಟ್ಟಡ ಆಗಸ್ಟ್.15ರಂದು ಉದ್ಘಾಟನೆ ಆಗಲಿದೆ. ಬಳಿಕ ಆಗಸ್ಟ್.29ರಂದು ಇಬ್ಬರು ಹೊಸ ಜೀವನಕ್ಕೆ ಕಾಲಿಡಲಿದ್ದೇವೆ’ ಎಂದು ಹೇಳಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…