ಮನರಂಜನೆ

ತಮಿಳಿನ ‘ರಾಜಪುತ್ರನ್‍’ ಚಿತ್ರದಲ್ಲಿ ಕೋಮಲ್‍ ನಟನೆ; ಮೇ.30ಕ್ಕೆ ಚಿತ್ರ ಬಿಡುಗಡೆ

ಕೋಮಲ್‍ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರ ಇದೇ ಮೇ.30ರಂದು ಬಿಡುಗಡೆ ಆಗುತ್ತಿದೆ.

ಒಂದು ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಕೋಮಲ್‍ ಸುಮಾರು ಒಂದು ವರ್ಷದ ಹಿಂದೆಯೇ ಹೇಳಿಕೊಂಡಿದ್ದರು. ತಮಿಳಿನ ಜನಪ್ರಿಯ ನಟು ಪ್ರಭು ಅವರೊಂದಿಗಿನ ವಿಡಿಯೋವೊಂದನ್ನು ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ರಾಜಪುತ್ರನ್‍’ ಹೆಸರಿನ ಆ ಚಿತ್ರ ಮೇ.30ರಂದು ಬಿಡುಗಡೆಯಾಗುತ್ತಿದೆ.

‘ರಾಜಪುತ್ರನ್‍’ ಚಿತ್ರದ ಟ್ರೇಲರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಈ ಟ್ರೇಲರ್‌ನಲ್ಲಿ ಬಾಯಲ್ಲಿ ಸಿಗಾರ್ ಹಚ್ಚಿಕೊಂಡು, ಕಣ್ಣಿಗೆ ಕೂಲಿಂಗ್‍ ಗ್ಲಾಸ್‍ ಹಾಕಿಕೊಂಡು ಎಂಟ್ರಿ ಕೊಡುವ ದೃಶ್ಯವನ್ನು ನೋಡಬಹುದು. ಈ ಚಿತ್ರದಲ್ಲಿ ಹಿರಿಯ ನಟ ಪ್ರಭು ಜೊತೆಗೆ ವೆಟ್ರಿ, ಕೃಷ್ಣ ಪ್ರಿಯಾ, ಮನ್ಸೂರ್‍ ಅಲಿಖಾನ್‍ ಮುಂತಾದವರು ನಟಿಸಿದ್ದು, ಮಹಾಕಂದನ್‍ ನಿರ್ದೇಶನ ಮಾಡಿದ್ದಾರೆ.

ಕೋಮಲ್‍ ಇದಕ್ಕೂ ಮುನ್ನ ಕಳೆದ 2014ರಲ್ಲಿ ಬಿಡುಗಡೆಯಾಗಿದ್ದ ‘ಐಂದಾಂ ತಲೈಪಮುರೈ ಸಿದ್ಧ ವೈದ್ಯ ಶಿಖಾಮಣಿ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಭರತ್‍, ನಂದಿತಾ, ಶ್ವೇತಾ ಮುಂತಾದವರು ನಟಿಸಿದ್ದ ಈ ಚಿತ್ರ ಬಿಡುಗಡೆಯಾಗಿ ಸುಮಾರು 11 ವರ್ಷಗಳ ನಂತರ ಕೋಮಲ್‍ ಅಭಿನಯದ ಇನ್ನೊಂದು ತಮಿಳು ಚಿತ್ರ ಬಿಡುಗಡೆಯಾಗುವುದಕ್ಕೆ ಸಿದ್ಧವಾಗುತ್ತಿದೆ.

ಇನ್ನು, ಕೋಮಲ್‍ ಅಭಿನಯದ ಕನ್ನಡ ಚಿತ್ರವೊಂದು ಬಿಡುಗಡೆಯಾಗದೆ ಆರೇಳು ತಿಂಗಳುಗಳಾಗಿವೆ. ಕಳೆದ ವರ್ಷ ಅಕ್ಟೋಬರ್‍ ತಿಂಗಳಲ್ಲಿ ಅವರ ಅಭಿನಯದ ಮತ್ತು ನಿರ್ಮಾಣದ ‘ಯಲಾ ಕುನ್ನಿ’ ಚಿತ್ರ ಬಿಡುಗಡೆ ಆಗಿತ್ತು. ಆದರೆ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಆಂದೋಲನ ಡೆಸ್ಕ್

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

10 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

10 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

11 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

12 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

12 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

13 hours ago