ಮನರಂಜನೆ

ತಮಿಳಿನ ‘ರಾಜಪುತ್ರನ್‍’ ಚಿತ್ರದಲ್ಲಿ ಕೋಮಲ್‍ ನಟನೆ; ಮೇ.30ಕ್ಕೆ ಚಿತ್ರ ಬಿಡುಗಡೆ

ಕೋಮಲ್‍ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರ ಇದೇ ಮೇ.30ರಂದು ಬಿಡುಗಡೆ ಆಗುತ್ತಿದೆ.

ಒಂದು ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಕೋಮಲ್‍ ಸುಮಾರು ಒಂದು ವರ್ಷದ ಹಿಂದೆಯೇ ಹೇಳಿಕೊಂಡಿದ್ದರು. ತಮಿಳಿನ ಜನಪ್ರಿಯ ನಟು ಪ್ರಭು ಅವರೊಂದಿಗಿನ ವಿಡಿಯೋವೊಂದನ್ನು ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ರಾಜಪುತ್ರನ್‍’ ಹೆಸರಿನ ಆ ಚಿತ್ರ ಮೇ.30ರಂದು ಬಿಡುಗಡೆಯಾಗುತ್ತಿದೆ.

‘ರಾಜಪುತ್ರನ್‍’ ಚಿತ್ರದ ಟ್ರೇಲರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಈ ಟ್ರೇಲರ್‌ನಲ್ಲಿ ಬಾಯಲ್ಲಿ ಸಿಗಾರ್ ಹಚ್ಚಿಕೊಂಡು, ಕಣ್ಣಿಗೆ ಕೂಲಿಂಗ್‍ ಗ್ಲಾಸ್‍ ಹಾಕಿಕೊಂಡು ಎಂಟ್ರಿ ಕೊಡುವ ದೃಶ್ಯವನ್ನು ನೋಡಬಹುದು. ಈ ಚಿತ್ರದಲ್ಲಿ ಹಿರಿಯ ನಟ ಪ್ರಭು ಜೊತೆಗೆ ವೆಟ್ರಿ, ಕೃಷ್ಣ ಪ್ರಿಯಾ, ಮನ್ಸೂರ್‍ ಅಲಿಖಾನ್‍ ಮುಂತಾದವರು ನಟಿಸಿದ್ದು, ಮಹಾಕಂದನ್‍ ನಿರ್ದೇಶನ ಮಾಡಿದ್ದಾರೆ.

ಕೋಮಲ್‍ ಇದಕ್ಕೂ ಮುನ್ನ ಕಳೆದ 2014ರಲ್ಲಿ ಬಿಡುಗಡೆಯಾಗಿದ್ದ ‘ಐಂದಾಂ ತಲೈಪಮುರೈ ಸಿದ್ಧ ವೈದ್ಯ ಶಿಖಾಮಣಿ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಭರತ್‍, ನಂದಿತಾ, ಶ್ವೇತಾ ಮುಂತಾದವರು ನಟಿಸಿದ್ದ ಈ ಚಿತ್ರ ಬಿಡುಗಡೆಯಾಗಿ ಸುಮಾರು 11 ವರ್ಷಗಳ ನಂತರ ಕೋಮಲ್‍ ಅಭಿನಯದ ಇನ್ನೊಂದು ತಮಿಳು ಚಿತ್ರ ಬಿಡುಗಡೆಯಾಗುವುದಕ್ಕೆ ಸಿದ್ಧವಾಗುತ್ತಿದೆ.

ಇನ್ನು, ಕೋಮಲ್‍ ಅಭಿನಯದ ಕನ್ನಡ ಚಿತ್ರವೊಂದು ಬಿಡುಗಡೆಯಾಗದೆ ಆರೇಳು ತಿಂಗಳುಗಳಾಗಿವೆ. ಕಳೆದ ವರ್ಷ ಅಕ್ಟೋಬರ್‍ ತಿಂಗಳಲ್ಲಿ ಅವರ ಅಭಿನಯದ ಮತ್ತು ನಿರ್ಮಾಣದ ‘ಯಲಾ ಕುನ್ನಿ’ ಚಿತ್ರ ಬಿಡುಗಡೆ ಆಗಿತ್ತು. ಆದರೆ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಆಂದೋಲನ ಡೆಸ್ಕ್

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

12 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

15 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

19 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

22 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

22 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

22 hours ago