ಮನರಂಜನೆ

ತಮಿಳಿನ ‘ರಾಜಪುತ್ರನ್‍’ ಚಿತ್ರದಲ್ಲಿ ಕೋಮಲ್‍ ನಟನೆ; ಮೇ.30ಕ್ಕೆ ಚಿತ್ರ ಬಿಡುಗಡೆ

ಕೋಮಲ್‍ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರ ಇದೇ ಮೇ.30ರಂದು ಬಿಡುಗಡೆ ಆಗುತ್ತಿದೆ.

ಒಂದು ತಮಿಳು ಚಿತ್ರವೊಂದರಲ್ಲಿ ನಟಿಸುತ್ತಿರುವುದಾಗಿ ಕೋಮಲ್‍ ಸುಮಾರು ಒಂದು ವರ್ಷದ ಹಿಂದೆಯೇ ಹೇಳಿಕೊಂಡಿದ್ದರು. ತಮಿಳಿನ ಜನಪ್ರಿಯ ನಟು ಪ್ರಭು ಅವರೊಂದಿಗಿನ ವಿಡಿಯೋವೊಂದನ್ನು ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ‘ರಾಜಪುತ್ರನ್‍’ ಹೆಸರಿನ ಆ ಚಿತ್ರ ಮೇ.30ರಂದು ಬಿಡುಗಡೆಯಾಗುತ್ತಿದೆ.

‘ರಾಜಪುತ್ರನ್‍’ ಚಿತ್ರದ ಟ್ರೇಲರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿದ್ದು, ಈ ಟ್ರೇಲರ್‌ನಲ್ಲಿ ಬಾಯಲ್ಲಿ ಸಿಗಾರ್ ಹಚ್ಚಿಕೊಂಡು, ಕಣ್ಣಿಗೆ ಕೂಲಿಂಗ್‍ ಗ್ಲಾಸ್‍ ಹಾಕಿಕೊಂಡು ಎಂಟ್ರಿ ಕೊಡುವ ದೃಶ್ಯವನ್ನು ನೋಡಬಹುದು. ಈ ಚಿತ್ರದಲ್ಲಿ ಹಿರಿಯ ನಟ ಪ್ರಭು ಜೊತೆಗೆ ವೆಟ್ರಿ, ಕೃಷ್ಣ ಪ್ರಿಯಾ, ಮನ್ಸೂರ್‍ ಅಲಿಖಾನ್‍ ಮುಂತಾದವರು ನಟಿಸಿದ್ದು, ಮಹಾಕಂದನ್‍ ನಿರ್ದೇಶನ ಮಾಡಿದ್ದಾರೆ.

ಕೋಮಲ್‍ ಇದಕ್ಕೂ ಮುನ್ನ ಕಳೆದ 2014ರಲ್ಲಿ ಬಿಡುಗಡೆಯಾಗಿದ್ದ ‘ಐಂದಾಂ ತಲೈಪಮುರೈ ಸಿದ್ಧ ವೈದ್ಯ ಶಿಖಾಮಣಿ’ ಎಂಬ ಚಿತ್ರದಲ್ಲಿ ನಟಿಸಿದ್ದರು. ಭರತ್‍, ನಂದಿತಾ, ಶ್ವೇತಾ ಮುಂತಾದವರು ನಟಿಸಿದ್ದ ಈ ಚಿತ್ರ ಬಿಡುಗಡೆಯಾಗಿ ಸುಮಾರು 11 ವರ್ಷಗಳ ನಂತರ ಕೋಮಲ್‍ ಅಭಿನಯದ ಇನ್ನೊಂದು ತಮಿಳು ಚಿತ್ರ ಬಿಡುಗಡೆಯಾಗುವುದಕ್ಕೆ ಸಿದ್ಧವಾಗುತ್ತಿದೆ.

ಇನ್ನು, ಕೋಮಲ್‍ ಅಭಿನಯದ ಕನ್ನಡ ಚಿತ್ರವೊಂದು ಬಿಡುಗಡೆಯಾಗದೆ ಆರೇಳು ತಿಂಗಳುಗಳಾಗಿವೆ. ಕಳೆದ ವರ್ಷ ಅಕ್ಟೋಬರ್‍ ತಿಂಗಳಲ್ಲಿ ಅವರ ಅಭಿನಯದ ಮತ್ತು ನಿರ್ಮಾಣದ ‘ಯಲಾ ಕುನ್ನಿ’ ಚಿತ್ರ ಬಿಡುಗಡೆ ಆಗಿತ್ತು. ಆದರೆ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಆಂದೋಲನ ಡೆಸ್ಕ್

Recent Posts

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…

16 mins ago

ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…

3 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣ ನೆಗೆಟಿವ್:‌ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್‌ ರಿಪೋರ್ಟ್‌ನಲ್ಲಿ ನೆಗೆಟಿವ್‌ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್‌…

4 hours ago

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ?

ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…

5 hours ago

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

6 hours ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

7 hours ago