ಮನರಂಜನೆ

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಹೀಗಿರುವಾಗಲೇ, ಅವರು ಇನ್ನೂ ಒಂದು ಹೊಸ ಚಿತ್ರದಲ್ಲಿ ನಟಿಸುವುದಕ್ಕೆ ಗ್ರೀನ್‍ ಸಿಗ್ನಲ್‍ ನೀಡಿದ್ದಾರೆ. ಹೆಸರು ‘ಕೋಣ’.

ಇದೊಂದು ಪ್ಯಾನ್‍ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಈ ಹಿಂದೆ ಜಗ್ಗೇಶ್‍ ಅಭಿನಯದ ‘8 MM’ ಚಿತ್ರವನ್ನು ನಿರ್ದೇಶಿಸಿದ್ದ ಹರಿಕೃಷ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್, ವಿಕ್ಟರಿ ಸಿನಿಮಾಸ್‍ನಲ್ಲಿ ಬಿಡುಗಡೆ ಆಗಿದೆ.

ಟೀಸರ್ ಬಿಡುಗಡೆ ಬಳಿಕ ಮಾತನಾಡಿದ ನಟ ಕೋಮಲ್ ಕುಮಾರ್, ‘’ಕೋಣ’ ಒಂದು ಮಜವಾದ ಕಥೆ. ಚಾರ್ಲಿ ಚಾಪ್ಲಿನ್‍ ಕಷ್ಟದಲ್ಲಿ ಸಿಕ್ಕಾಗ ಜನ ಹೇಗೆ ಎಂಜಾಯ್ ಮಾಡುತ್ತಾರೋ, ಅದೇ ರೀತಿ ಚಿತ್ರದಲ್ಲಿ ನಾನು ಸಮಸ್ಯಗೆ ಸಿಲುಕಿದಾಗ ಖುಷಿಪಡುತ್ತಾರೆ. ಮೂಢನಂಬಿಕೆಯ ಕುರಿತಾದ ಚಿತ್ರವಿದು. ಇದರಲ್ಲಿ ನನ್ನನ್ನು ಹೊಸದಾಗಿ ತೋರಿಸುತ್ತಿದ್ದಾರೆ. ಇಲ್ಲಿ ರೋಬೋಟ್‍ ಒಂದು ಪ್ರಮುಖ ಪಾತ್ರ ವಹಿಸುತ್ತದೆ’ ಎಂದರು.

ನಿರ್ದೇಶಕರಾದ ಹರಿಕೃಷ್ಣ ಮಾತನಾಡಿ, ‘ಅತಿ ಶೀಘ್ರದಲ್ಲೇ ಶೂಟಿಂಗ್ ಶುರು ಮಾಡುತ್ತೇವೆ. ದೀಪಾವಳಿ ಬಳಿಕ ಮುಹೂರ್ತ ಮಾಡುತ್ತೇವೆ. ‌ಹಳ್ಳಿಯಲ್ಲಿ ಕೋಣದ ಜೊತೆ ನಡೆಯುವ ಕಥೆ’ ಇದು ಎಂದರು.

ವಿಶೇಷವೆಂದರೆ, ಈ ಚಿತ್ರದಲ್ಲಿ ನಾಯಕಿಯಾಗಿ ತನಿಷಾ ಕುಪ್ಪುಂಡ ನಟಿಸುತ್ತಿರುವುದಷ್ಟೇ ಅಲ್ಲ, ಕಾರ್ತಿಕ್‍ ಕಿರಣ್ ಸಂಕಲ್ಪ ಮತ್ತು ರವಿಕಿರಣ್‍ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಮೊದಲು ಆಲ್ಬಂ ಸಾಂಗ್ ಮಾಡಬೇಕು ಎಂಬ ಆಸೆ ಇತ್ತು. ಆ ಬಳಿಕ ಸಿನಿಮಾ ಮಾಡುವ ಹಂತಕ್ಕೆ ಬಂದಿದ್ದೇವೆ. ಎಲ್ಲಾ ಸ್ನೇಹಿತರು ಜೊತೆಗೂಡಿ ಸಿನಿಮಾ ಶುರು ಮಾಡಿದ್ದೇವೆ. ಕೋಮಲ್ ಸರ್ ನಮ್ಮ ಜೊತೆಗೆ ಸೇರಿಕೊಂಡಿದ್ದು ಖುಷಿ ಇದೆ’ ಎಂದರು.

ಕುಪ್ಪುಂಡ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ ಹಾಗೂ ಗಿರೀಶ್ ಆರ್. ಗೌಡ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago