ಮನರಂಜನೆ

ಅ.31ರಂದು ‘ಕೋಣ’ದ ಜೊತೆಗೆ ಬರ್ತಿದ್ದಾರೆ ಕೋಮಲ್ …

‘ಕೋಣ’ ಎಂಬ ಚಿತ್ರದಲ್ಲಿ ಕೋಮಲ್‍ ನಟಿಸುತ್ತಿರುವ ಸುದ್ದಿ ನೆನಪಿದೆಯಲ್ಲಾ? ಕಳೆದ ವರ್ಷ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈಗ ಚಿತ್ರವು ಸದ್ದಿಲ್ಲದೆ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಅಕ್ಟೋರ್.31ರಂದು ಚಿತ್ರವು ಬಿಡುಗಡೆಯಾಗುತ್ತಿದೆ.

ಕುಪ್ಪಂಡಾಸ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ತನಿಶಾ ಕುಪ್ಪಂಡ, ಕಾರ್ತಿಕ್ ಕಿರಣ್ ಸಂಕಪಾಲ್, ರವಿಕಿರಣ್ ಎನ್ ನಿರ್ಮಾಣ ಮಾಡಿರುವ ‘ಕೋಣ’ ಬಿಡುಗಡೆಯಾಗುತ್ತಿರುವ ವಿಷಯವನ್ನು ಹಂಚಿಕೊಳ್ಳಲು ಚಿತ್ರತಂಡದವರು ಸೇರಿದ್ದರು. ಈ ಚಿತ್ರಕ್ಕೆ ಹರಿಕೃಷ್ಣ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಶಶಾಂಕ್‍ ಶೇಷಗಿರಿ ಸಂಗೀತ ಮತ್ತು ವೀನಸ್‍ ನಾಗರಾಜ ಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಇದನ್ನು ಓದಿ: ‘ಜೋಡೆತ್ತು’ ಜತೆ ಬಂದ ಚಿಕ್ಕಣ್ಣ: ಮೂರು ಭಾಷೆಗಳಲ್ಲಿ ಮಹೇಶ್‍ ಸಿನಿಮಾ

ಈ ವೇಳೆ ಮಾತನಾಡಿದ ನಟ ಕೋಮಲ್, ‘ನಾನು ಸ್ಕೂಲ್ ನಲ್ಲಿ ಓದಬೇಕಾದರೆ‌ ನಮ್ಮ ಟೀಚರ್, ಕೋಣ ಕೋಣ ಎನ್ನುತ್ತಿದ್ದರು. ನನಗೆ ಆಗ ಕೋಪ ಬರುತ್ತಿತ್ತು. ಈಗ ಕೋಣ ಚಿತ್ರ ಮಾಡುತ್ತಿರುವುದು ಖುಷಿಯಾಗುತ್ತದೆ. ನನಗೆ ಬಹಳ ತೃಪ್ತಿಕೊಟ್ಟ ಚಿತ್ರ ಇದು. ಸುಮಾರು ಎರಡು ತಿಂಗಳ ಹಿಂದೆಯೇ ಈ ಚಿತ್ರ ಬಂದಿದ್ದರೆ ಚೆನ್ನಾಗಿರುತ್ತಿತ್ತು’ ಎಂದರು.

ನಟಿ ತನಿಶಾ ಕುಪ್ಪಂಡ ಮಾತನಾಡಿ,‌ ‘ಕೋಣ’ ಸಿನಿಮಾದಲ್ಲಿ ನಾನು ಲಕ್ಷ್ಮಿ ಎಂಬ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಕೋಮಲ್ ಅವರು ನಾರಾಯಣ ಎಂಬ ಪಾತ್ರ ಮಾಡಿದ್ದಾರೆ. ಅವರ ಪತ್ನಿಯಾಗಿ ನಾನು ನಟಿಸಿದ್ದೇನೆ. ಇಷ್ಟು ದಿನ ನೀವು ನೋಡದ ಪಾತ್ರದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಈ ಪಾತ್ರ ನೋಡಿ ಇವರು ಈ ರೀತಿ ನಟಿಸಬಹುದಾ ಎನ್ನಬಹುದು’ ಎಂದರು.

‘ಕೋಣ’ ಚಿತ್ರದಲ್ಲಿ ಕೋಮಲ್‍ ಮತ್ತು ತನಿಶಾ ಜೊತೆಗೆ ಕೀರ್ತಿರಾಜ್, ರಿತ್ವಿ ಜಗದೀಶ್, ರಾಘು ರಾಮನಕೊಪ್ಪ, ವಿಜಯ್ ಚೆಂಡೂರ್, ಎಂ.ಕೆ.ಮಠ, ರಂಜಿತ್ ಗೌಡ, ತುಕಾಲಿ ಸಂತೋಷ್, ಹುಲಿ ಕಾರ್ತಿಕ್ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

2 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

5 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

8 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

9 hours ago