ಮನರಂಜನೆ

ವಜ್ರಮುನಿಯಾದ ಕೋಮಲ್; ‘ಯಲಾ ಕುನ್ನಿ’ ಚಿತ್ರದ ಪೋಸ್ಟರ್ ಬಿಡುಗಡೆ

‘ಯಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ದ್ವಿಪಾತ್ರಗಳಲ್ಲಿ ನಟಿಸುತ್ತಿರುವುದು, ಒಂದು ಪಾತ್ರ ‘ಸಂಪತ್ತಿಗೆ ಸವಾಲ್‍’ ಚಿತ್ರದ ಸಾಹುಕಾರ್ ಸಿದ್ಧಪ್ಪನನ್ನು ನೆನಪಿಸುವ ಪಾತ್ರವಾಗಿರುವುದು ಗೊತ್ತೇ ಇದೆ. ಆದರೆ, ಸಿದ್ಧಪ್ಪನಾಗಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಈಗ ಅದಕ್ಕೂ ಉತ್ತರ ಸಿಕ್ಕಿದೆ.

ಗಣೇಶ ಹಬ್ಬದ ಪ್ರಯುಕ್ತ ‘ಯಲಾ ಕುನ್ನಿ’ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಕೋಮಲ್‍, ವಜ್ರಮುನಿಯಾಗಿಯೇ ಕಾಣಿಸಿಕೊಂಡಿದ್ದಾರೆ. ಬಾಯಲ್ಲೊಂದು ಚುಟ್ಟಾ, ಹೆಗಲ ಮೇಲಿನ ವಸ್ತ್ರಕ್ಕೆ ಅಂಟಿದ ರಕ್ತ, ಮುಖದಲ್ಲಿ ಸಿಟ್ಟು … ಇವೆಲ್ಲವೂ ವಜ್ರಮುನಿ ಅವರನ್ನು ನೆನಪಿಸುತ್ತದೆ.

ಅಂದಹಾಗೆ, ಈ ‘ಯಲಾ ಕುನ್ನಿ’ ಎನ್ನುವುದು ಅವರದೇ ಜನಪ್ರಿಯ ಸಂಭಾಷಣೆ. ಈ ಸಂಭಾಷಣೆಯನ್ನು ಅವರು ‘ಸಂಪತ್ತಿಗೆ ಸವಾಲ್‍ ಚಿತ್ರದಲ್ಲಿ ಹೇಳಿದ್ದರು. ಅಲ್ಲಿಂದ ಈ ಸಂಭಾಷಣೆ ಸಾಕಷ್ಟು ಜನಪ್ರಿಯವಾಗಿದ್ದು. ಇದೀಗ ಅದೇ ‘ಯಲಾ ಕುನ್ನಿ’ ಎಂಬ ಪದಗಳು ಕೋಮಲ್‍ ಅಭಿನಯದ ಚಿತ್ರದ ಶೀರ್ಷಿಕೆಯಾಗಿದೆ.

‘ಯಲಾ ಕುನ್ನಿ’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಕುಂಬಳಕಾಯಿ ಒಡೆಯಲಾಗಿದೆ. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡವು, ಸದ್ಯ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ಚಿತ್ರಕ್ಕಾಗಿ ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.

ಕೋಮಲ್ ಜೊತೆಗೆ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ ಆರ್ ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‍ಕರ್, ಮಾನಸಿ ಸುಧೀರ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ ಮುಂತಾದವರು ನಟಿಸಿದ್ದು ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ‘ಗಿಚ್ಚಿಗಿಲಿಗಿಲಿ’ಯ ಅಮೃತಾ ಬಣ್ಣ ಹಚ್ಚಿದ್ದಾರೆ. ವಿಶೇಷವೆಂದರೆ, ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದ್ದಾರೆ. ಮಯೂರ್ ಪಟೇಲ್ ಖಳ ನಾಯಕನಾಗಿ ನಟಿಸಿದ್ದಾರೆ.

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್ ಮತ್ತು ಸಹನ ಮೂರ್ತಿ ನಿರ್ಮಿಸಿರುವ ‘ಯಲಾ ಕುನ್ನಿ’ ಚಿತ್ರಕ್ಕೆ ಎನ್‍.ಆರ್. ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago