ಮನರಂಜನೆ

ವಜ್ರಮುನಿಯಾದ ಕೋಮಲ್; ‘ಯಲಾ ಕುನ್ನಿ’ ಚಿತ್ರದ ಪೋಸ್ಟರ್ ಬಿಡುಗಡೆ

‘ಯಲಾ ಕುನ್ನಿ’ ಚಿತ್ರದಲ್ಲಿ ಕೋಮಲ್‍ ದ್ವಿಪಾತ್ರಗಳಲ್ಲಿ ನಟಿಸುತ್ತಿರುವುದು, ಒಂದು ಪಾತ್ರ ‘ಸಂಪತ್ತಿಗೆ ಸವಾಲ್‍’ ಚಿತ್ರದ ಸಾಹುಕಾರ್ ಸಿದ್ಧಪ್ಪನನ್ನು ನೆನಪಿಸುವ ಪಾತ್ರವಾಗಿರುವುದು ಗೊತ್ತೇ ಇದೆ. ಆದರೆ, ಸಿದ್ಧಪ್ಪನಾಗಿ ಕೋಮಲ್‍ ಹೇಗೆ ಕಾಣಿಸುತ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇತ್ತು. ಈಗ ಅದಕ್ಕೂ ಉತ್ತರ ಸಿಕ್ಕಿದೆ.

ಗಣೇಶ ಹಬ್ಬದ ಪ್ರಯುಕ್ತ ‘ಯಲಾ ಕುನ್ನಿ’ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಕೋಮಲ್‍, ವಜ್ರಮುನಿಯಾಗಿಯೇ ಕಾಣಿಸಿಕೊಂಡಿದ್ದಾರೆ. ಬಾಯಲ್ಲೊಂದು ಚುಟ್ಟಾ, ಹೆಗಲ ಮೇಲಿನ ವಸ್ತ್ರಕ್ಕೆ ಅಂಟಿದ ರಕ್ತ, ಮುಖದಲ್ಲಿ ಸಿಟ್ಟು … ಇವೆಲ್ಲವೂ ವಜ್ರಮುನಿ ಅವರನ್ನು ನೆನಪಿಸುತ್ತದೆ.

ಅಂದಹಾಗೆ, ಈ ‘ಯಲಾ ಕುನ್ನಿ’ ಎನ್ನುವುದು ಅವರದೇ ಜನಪ್ರಿಯ ಸಂಭಾಷಣೆ. ಈ ಸಂಭಾಷಣೆಯನ್ನು ಅವರು ‘ಸಂಪತ್ತಿಗೆ ಸವಾಲ್‍ ಚಿತ್ರದಲ್ಲಿ ಹೇಳಿದ್ದರು. ಅಲ್ಲಿಂದ ಈ ಸಂಭಾಷಣೆ ಸಾಕಷ್ಟು ಜನಪ್ರಿಯವಾಗಿದ್ದು. ಇದೀಗ ಅದೇ ‘ಯಲಾ ಕುನ್ನಿ’ ಎಂಬ ಪದಗಳು ಕೋಮಲ್‍ ಅಭಿನಯದ ಚಿತ್ರದ ಶೀರ್ಷಿಕೆಯಾಗಿದೆ.

‘ಯಲಾ ಕುನ್ನಿ’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಕುಂಬಳಕಾಯಿ ಒಡೆಯಲಾಗಿದೆ. ಸದ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡವು, ಸದ್ಯ ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಈ ಚಿತ್ರಕ್ಕಾಗಿ ಬೆಂಗಳೂರು, ಮೈಸೂರು ಹಾಗೂ ಶ್ರೀರಂಗಪಟ್ಟಣದಲ್ಲಿ ಚಿತ್ರೀಕರಣ ನಡೆದಿದೆ. ಶ್ರೀರಂಗಪಟ್ಟಣದಲ್ಲಿ ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗಿತ್ತು.

ಕೋಮಲ್ ಜೊತೆಗೆ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ ಆರ್ ಪೇಟೆ, ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರ್‍ಕರ್, ಮಾನಸಿ ಸುಧೀರ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ ಮುಂತಾದವರು ನಟಿಸಿದ್ದು ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ‘ಗಿಚ್ಚಿಗಿಲಿಗಿಲಿ’ಯ ಅಮೃತಾ ಬಣ್ಣ ಹಚ್ಚಿದ್ದಾರೆ. ವಿಶೇಷವೆಂದರೆ, ವಜ್ರಮುನಿ ಯವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದ್ದಾರೆ. ಮಯೂರ್ ಪಟೇಲ್ ಖಳ ನಾಯಕನಾಗಿ ನಟಿಸಿದ್ದಾರೆ.

ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್ ಮತ್ತು ಸಹನ ಮೂರ್ತಿ ನಿರ್ಮಿಸಿರುವ ‘ಯಲಾ ಕುನ್ನಿ’ ಚಿತ್ರಕ್ಕೆ ಎನ್‍.ಆರ್. ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago