ಮನರಂಜನೆ

‘ಕೊರಗಜ್ಜ’ ಪೂರ್ಣ; ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಸದ್ಯದಲ್ಲೇ ತೆರೆಗೆ

ಕೆಲವು ವರ್ಷಗಳ ಹಿಂದಿನ ಮಾತು. ನಟಿ-ನಿರ್ಮಾಪಕಿ-ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್‍, ‘ಕೊರಗಜ್ಜ’ ಎಂಬ ಚಿತ್ರ ಮಾಡಬೇಕು ಎಂದು ಹೊರಟರು. ಕೆಲವು ದಿನಗಳ ಕಾಲ ಚಿತ್ರೀಕರಣ ನಡೆದರೂ ಕಾರಣಾಂತರಗಳಿಂದ ಮುಂದುವರೆಯಲಿಲ್ಲವಂತೆ. ಕೊನೆಗೆ ಈ ಚಿತ್ರವನ್ನು ಅವರು ಕೈಬಿಟ್ಟಿದ್ದಾರೆ.

ಈಗ್ಯಾಕೆ ಈ ಮಾತು ಎಂದರೆ, ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಸುಧೀರ್‍ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಚಿತ್ರವು ಹಲವು ಅಡೆತಡೆಗಳನ್ನು ದಾಟಿ ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರವನ್ನು ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್‍ ಅಡಿ ತ್ರಿವಿಕ್ರಮ ಸಪಲ್ಯ ನಿರ್ಮಿಸಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಹಾಗೂ 3ಡಿ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ ‘ಕೊರಗಜ್ಜ’ ಚಿತ್ರದ ಎರಡು ಕಟೌಟ್‍ಗಳನ್ನು ಅನಾವರಣಗೊಳಿಸಲಾಯಿತು. ಈ ಸಮಾರಂಭದಲ್ಲಿ ಮಾಜಿ ಸಚಿವೆ ಮೋಟಮ್ಮ, ವಿಜಯಲಕ್ಷ್ಮಿ ಸಿಂಗ್, ಭವ್ಯ, ಶ್ರುತಿ ಮುಂತಾದವರು ಹಾಜರಿದ್ದರು.

ಇದನ್ನು ಓದಿ: ಮಕ್ಕಳ ದಿನದಂದು ತೆರೆಗೆ ಬರಲಿದೆ ‘ಪಾಠಶಾಲಾ’

‘ಕೊರಗಜ್ಜ’ ಕುರಿತು ಮಾತನಾಡಿದ ಸುಧೀರ್ ಅತ್ತಾವರ್‍, ‘ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ ಈಗ ಅನೇಕ ಅಡೆತಡೆಗಳನ್ನು ದಾಟಿ ಬಿಡುಗಡೆಯ ಹಂತ ತಲುಪಿದೆ. ಕೊರಗಜ್ಜನ ಆಶೀರ್ವಾದದಿಂದ ಸಿನಿಮಾ ಅಂದುಕೊಂಡ ಹಾಗೆ ಬಂದಿದೆ. ಯಾವುದೇ ಕೊರತೆ ಬಾರದ ಹಾಗೆ ತ್ರಿವಿಕ್ರಮ ಸಪಲ್ಯ ನಿರ್ಮಿಸಿದ್ದಾರೆ. ನಮ್ಮ ಚಿತ್ರದಲ್ಲಿ ಒಟ್ಟು 31 ಹಾಡುಗಳಿದೆ (ಆರು ಭಾಷೆಗಳಿಂದ). ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆಯಲ್ಲಿ ಭಾರತದ ಪ್ರಸಿದ್ದ ಗಾಯಕ – ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ’ ಎಂದರು.

ಇದು ನಾನು, ಜೈ ಜಗದೀಶ್ ಆರಂಭಿಸಿದ ಸಿನಿಮಾ ಎಂದು ನೆನಪಿಸಿಕೊಂಡ ವಿಜಯಲಕ್ಷ್ಮೀ ಸಿಂಗ್‍, ‘ಸುಮಾರು 25 ಸಿನಿಮಾ ನಿರ್ಮಾಣ ಮಾಡಿರುವ ನಮಗೆ ಈ ಸಿನಿಮಾ ನಿರ್ಮಾಣ ಮಾಡಲು ಸಾಧ್ಯವಾಗದೆ, ಈ ಚಿತ್ರದಿಂದ ಹಿಂದೆ ಸರಿದೆವು. ಆದರೆ, ಈಗ ಅದು ಸುಧೀರ್ ಅತ್ತಾವರ್ ಅವರಿಗೆ ಇದು ಒಲಿದಿದೆ’ ಎಂದು ತಿಳಿದರು.

ತನ್ನ ವೃತ್ತಿಜೀವನದಲ್ಲೇ ಇದು ವಿಭಿನ್ನವಾದ ಸಿನಿಮಾ ಎಂದ ಶ್ರುತಿ, ‘ನಾನು ಈ ಚಿತ್ರದಲ್ಲಿ ಕೊರಗಜ್ಜನ ಸಾಕು ತಾಯಿಯ ಪಾತ್ರ ನಿರ್ವಹಿಸಿದ್ದೇನೆ. ಈ ಚಿತ್ರಕ್ಕಾಗಿ ಸತತ 28 ತಾಸುಗಳ ಚಿತ್ರೀಕರಣ ಮಾಡಿದ್ದೇನೆ. ಇದು ಮರೆಯಲಾರದ ಅನುಭವ. ಕೊರಗಜ್ಜನ ಆಶೀರ್ವಾದದಿಂದ ಚಿತ್ರ ಯಶಸ್ವಿಯಾಗಲೆಂದು’ ಹಾರೈಸಿದರು.

ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಕೂಡಾ ಕೊರಗಜ್ಜನನ್ನು ಆರಾಧಿಸುವ ಕುಟುಂಬದವರಂತೆ. ಹಾಗಾಗಿ, ಈ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ನವೆಂಬರ್ ಕೊನೆಗೆ ಚಿತ್ರವನ್ನು ಬಿಡುಗಡೆ ಆಗುವ ಸಾಧ್ಯತೆ ಇದೆ. ಚಿತ್ರದಲ್ಲಿ ಕಬೀರ್‍ ಬೇಡಿ, ಭವ್ಯಾ, ಶ್ರುತಿ ಮುಂತಾದವರು ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಿಡಿಒನಿಂದ ಸರ್ಕಾರಿ ಆಸ್ತಿ ಗುಳುಂ ಆರೋಪ

ಮಹಾದೇಶ್ ಎಂ. ಗೌಡ ಹನೂರು : ಸರ್ಕಾರದ ಆಸ್ತಿ ರಕ್ಷಣೆ ಮಾಡಬೇಕಾದ ಅಧಿಕಾರಿಯೇ ಸರ್ಕಾರಿ ಆಸ್ತಿಯನ್ನು ಗುಳುಂ ಮಾಡಿರುವ ಗಂಭೀರ…

2 mins ago

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

12 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

12 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

13 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

13 hours ago