ಮನರಂಜನೆ

‘ಕೊರಗಜ್ಜ’ ಪೂರ್ಣ; ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ಸದ್ಯದಲ್ಲೇ ತೆರೆಗೆ

ಕೆಲವು ವರ್ಷಗಳ ಹಿಂದಿನ ಮಾತು. ನಟಿ-ನಿರ್ಮಾಪಕಿ-ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್‍, ‘ಕೊರಗಜ್ಜ’ ಎಂಬ ಚಿತ್ರ ಮಾಡಬೇಕು ಎಂದು ಹೊರಟರು. ಕೆಲವು ದಿನಗಳ ಕಾಲ ಚಿತ್ರೀಕರಣ ನಡೆದರೂ ಕಾರಣಾಂತರಗಳಿಂದ ಮುಂದುವರೆಯಲಿಲ್ಲವಂತೆ. ಕೊನೆಗೆ ಈ ಚಿತ್ರವನ್ನು ಅವರು ಕೈಬಿಟ್ಟಿದ್ದಾರೆ.

ಈಗ್ಯಾಕೆ ಈ ಮಾತು ಎಂದರೆ, ಮೂರು ವರ್ಷಗಳ ಹಿಂದೆ ಪ್ರಾರಂಭವಾದ ಸುಧೀರ್‍ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಚಿತ್ರವು ಹಲವು ಅಡೆತಡೆಗಳನ್ನು ದಾಟಿ ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರವನ್ನು ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್‍ ಅಡಿ ತ್ರಿವಿಕ್ರಮ ಸಪಲ್ಯ ನಿರ್ಮಿಸಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಹಾಗೂ 3ಡಿ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.

ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ ‘ಕೊರಗಜ್ಜ’ ಚಿತ್ರದ ಎರಡು ಕಟೌಟ್‍ಗಳನ್ನು ಅನಾವರಣಗೊಳಿಸಲಾಯಿತು. ಈ ಸಮಾರಂಭದಲ್ಲಿ ಮಾಜಿ ಸಚಿವೆ ಮೋಟಮ್ಮ, ವಿಜಯಲಕ್ಷ್ಮಿ ಸಿಂಗ್, ಭವ್ಯ, ಶ್ರುತಿ ಮುಂತಾದವರು ಹಾಜರಿದ್ದರು.

ಇದನ್ನು ಓದಿ: ಮಕ್ಕಳ ದಿನದಂದು ತೆರೆಗೆ ಬರಲಿದೆ ‘ಪಾಠಶಾಲಾ’

‘ಕೊರಗಜ್ಜ’ ಕುರಿತು ಮಾತನಾಡಿದ ಸುಧೀರ್ ಅತ್ತಾವರ್‍, ‘ಮೂರು ವರ್ಷಗಳ ಹಿಂದೆ ಆರಂಭವಾದ ಸಿನಿಮಾ ಈಗ ಅನೇಕ ಅಡೆತಡೆಗಳನ್ನು ದಾಟಿ ಬಿಡುಗಡೆಯ ಹಂತ ತಲುಪಿದೆ. ಕೊರಗಜ್ಜನ ಆಶೀರ್ವಾದದಿಂದ ಸಿನಿಮಾ ಅಂದುಕೊಂಡ ಹಾಗೆ ಬಂದಿದೆ. ಯಾವುದೇ ಕೊರತೆ ಬಾರದ ಹಾಗೆ ತ್ರಿವಿಕ್ರಮ ಸಪಲ್ಯ ನಿರ್ಮಿಸಿದ್ದಾರೆ. ನಮ್ಮ ಚಿತ್ರದಲ್ಲಿ ಒಟ್ಟು 31 ಹಾಡುಗಳಿದೆ (ಆರು ಭಾಷೆಗಳಿಂದ). ಗೋಪಿ ಸುಂದರ್ ಅವರ ಸಂಗೀತ ಸಂಯೋಜನೆಯಲ್ಲಿ ಭಾರತದ ಪ್ರಸಿದ್ದ ಗಾಯಕ – ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ’ ಎಂದರು.

ಇದು ನಾನು, ಜೈ ಜಗದೀಶ್ ಆರಂಭಿಸಿದ ಸಿನಿಮಾ ಎಂದು ನೆನಪಿಸಿಕೊಂಡ ವಿಜಯಲಕ್ಷ್ಮೀ ಸಿಂಗ್‍, ‘ಸುಮಾರು 25 ಸಿನಿಮಾ ನಿರ್ಮಾಣ ಮಾಡಿರುವ ನಮಗೆ ಈ ಸಿನಿಮಾ ನಿರ್ಮಾಣ ಮಾಡಲು ಸಾಧ್ಯವಾಗದೆ, ಈ ಚಿತ್ರದಿಂದ ಹಿಂದೆ ಸರಿದೆವು. ಆದರೆ, ಈಗ ಅದು ಸುಧೀರ್ ಅತ್ತಾವರ್ ಅವರಿಗೆ ಇದು ಒಲಿದಿದೆ’ ಎಂದು ತಿಳಿದರು.

ತನ್ನ ವೃತ್ತಿಜೀವನದಲ್ಲೇ ಇದು ವಿಭಿನ್ನವಾದ ಸಿನಿಮಾ ಎಂದ ಶ್ರುತಿ, ‘ನಾನು ಈ ಚಿತ್ರದಲ್ಲಿ ಕೊರಗಜ್ಜನ ಸಾಕು ತಾಯಿಯ ಪಾತ್ರ ನಿರ್ವಹಿಸಿದ್ದೇನೆ. ಈ ಚಿತ್ರಕ್ಕಾಗಿ ಸತತ 28 ತಾಸುಗಳ ಚಿತ್ರೀಕರಣ ಮಾಡಿದ್ದೇನೆ. ಇದು ಮರೆಯಲಾರದ ಅನುಭವ. ಕೊರಗಜ್ಜನ ಆಶೀರ್ವಾದದಿಂದ ಚಿತ್ರ ಯಶಸ್ವಿಯಾಗಲೆಂದು’ ಹಾರೈಸಿದರು.

ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಕೂಡಾ ಕೊರಗಜ್ಜನನ್ನು ಆರಾಧಿಸುವ ಕುಟುಂಬದವರಂತೆ. ಹಾಗಾಗಿ, ಈ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ನವೆಂಬರ್ ಕೊನೆಗೆ ಚಿತ್ರವನ್ನು ಬಿಡುಗಡೆ ಆಗುವ ಸಾಧ್ಯತೆ ಇದೆ. ಚಿತ್ರದಲ್ಲಿ ಕಬೀರ್‍ ಬೇಡಿ, ಭವ್ಯಾ, ಶ್ರುತಿ ಮುಂತಾದವರು ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago