ಮನರಂಜನೆ

ಮಲಯಾಳಂಗೆ ಕೆ.ಆರ್.ಜಿ.ಸ್ಟೂಡಿಯೋಸ್; ‘ಪಡಕ್ಕಳಂ’ ಆರಂಭ

ಕೆ.ಆರ್.ಜಿ ಸ್ಟುಡಿಯೋಸ್‍ನ ಕಾರ್ತಿಕ್‍ ಗೌಡ ಮತ್ತು ಯೋಗಿ ಜಿ ರಾಜ್‍ ಅವರು ಮಲಯಾಳಂನಲ್‍ಲಿ ಚಿತ್ರವೊಂದನ್ನು ನಿರ್ಮಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆ ನಂತರ ಈ ವಿಷಯದ ಕುರಿತು ಯಾವುದೇ ಅಪ್‍ಡೇಟ್ ಇರಲಿಲ್ಲ. ಈಗ ಕೊನೆಗೂ ಕಾರ್ತಿಕ್‍ ಮತ್ತು ಯೋಗಿ, ಮಲಯಾಳಂ ಚಿತ್ರ ಪ್ರಾರಂಭಿಸಿದ್ದಾರೆ.

ಚಿತ್ರಕ್ಕೆ ‘ಪಡಕ್ಕಳಂ’ ಎಂಬ ಹೆಸರನ್ನು ಇಡಲಾಗಿದ್ದು, ಇತ್ತೀಚೆಗೆ ಚಿತ್ರದ ಕೊಚ್ಚಿಯಲ್ಲಿ ಮುಹೂರ್ತವಾಗಿದೆ. ಈ ಸಂದರ್ಭದಲ್ಲಿ ಚಿತ್ರದ ಮೋಷನ್‍ ಪೋಸ್ಟರ್‍ ಸಹ ಬಿಡುಗಡೆ ಆಗಿದೆ.

‘ಪಡಕ್ಕಳಂ’ ಒಂದು ಹಾಸ್ಯಭರಿತ ಫ್ಯಾಂಟಸಿಯ ಚಿತ್ರವಾಗಿದ್ದು, ಚಿತ್ರವನ್ನು ಮನು ಸ್ವರಾಜ್ ನಿರ್ದೇಶಿಸುತ್ತಾರೆ. ಈ ಚಿತ್ರ ಅವರ ಮೊದಲ ಪ್ರಯತ್ನವಾಗಿದ್ದು, ಇದನ್ನು ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಜೊತೆಗೆ ಖ್ಯಾತ ಮಲಯಾಳಂ ನಟ, ನಿರ್ಮಾಪಕ ವಿಜಯ್ ಬಾಬು ಫ್ರೈಡೇ ಫಿಲಂ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣದಲ್ಲಿ ಕೈಜೋಡಿಸಿದ್ದಾರೆ.

ಕೆ.ಆರ್‍.ಜಿ. ಸ್ಟುಡಿಯೋಸ್‍ ಸಂಸ್ಥೆಯು ಕನ್ನಡದಲ್ಲಿ ಸದ್ಯ ಎರಡು ಚಿತ್ರಗಳನ್ನು ನಿರ್ಮಸುತ್ತಿದೆ. ಈ ಪೈಕಿ ದಿಗಂತ್‍ ಮತ್ತು ಧನ್ಯಾ ರಾಮ್‍ಕುಮಾರ್‍ ಅಭಿನಯದ ‘ಪೌಡರ್‍’ ಚಿತ್ರದ ಚಿತ್ರೀಕರಣ ಮುಗಿದು ಆಗಸ್ಟ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಇದಲ್ಲದೆ, ಶಿವರಾಜಕುಮಾರ್‍ ಮತ್ತು ಧನಂಜಯ್‍ ಅಭಿನಯದಲ್ಲಿ ‘ಉತ್ತರಕಾಮಡ’ ಚಿತ್ರವನ್ನು ನಿರ್ಮಿಸುತ್ತಿದ್ದು, ಅರ್ಧ ಚಿತ್ರೀಕರಣ ಮುಗಿದಿದೆ. ಈ ಚಿತ್ರವನ್ನು ರೋಹಿತ್‍ ಪದಕಿ ನಿರ್ದೇಶನ ಮಾಡುತ್ತಿದ್ದಾರೆ.

ಇವೆರಡೂ ಚಿತ್ರಗಳ ಜೊತೆಗೆ ‘ಕಿರಿಕ್ ‘et’ 11’ ಎಂಬ ಇನ್ನೊಂದು ಕನ್ನಡ ಚಿತ್ರವನ್ನು ಈಗಾಗಲೇ ‍ಘೋಷಿಸಲಾಗಿದ್ದು, ಇದರಲ್ಲಿ ನವೀನ್ ಶಂಕರ್ ಮತ್ತು ದಾನಿಶ್ ಸೇಠ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಮನ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನು, ತಮಿಳು ಚಿತ್ರರಂಗಕ್ಕೂ ಕಾಲಿಟ್ಟಿರುವ ಕೆ.ಆರ್.ಜಿ. ಸ್ಟುಡಿಯೋಸ್‍, ಮಲಯಾಳಂ ನಿರ್ದೇಶಕಿಯ ಜೊತೆಗೆ ತಮಿಳು ಚಿತ್ರವೊಂದನ್ನು ಮಾಡುವುದಕ್ಕೆ ಹೊರಟಿದೆ. ಮಲಯಾಳಂನಲ್ಲಿ ಬೆಂಗಳೂರು ಡೇಸ್’, ‘ಉಸ್ತಾದ್ ಹೊಟೇಲ್’, ‘ಮಂಜಡಿಕುರು’, ‘ಕೂಡೆ’ ಮತ್ತು ಇತ್ತೀಚಿನ ‘ವಂಡರ್ ವುಮನ್’ನಂತಹ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಅಂಜಲಿ ಮೆನನ್‍ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರ ಇನ್ನಷ್ಟೇ ಶುರುವಾಗಬೇಕಿದೆ.

ಭೂಮಿಕಾ

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

4 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

4 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

4 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

4 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

6 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

7 hours ago